ನಾನು ಸಾಯುವವರೆಗೂ ಸಿಎಂ ಸಿದ್ದರಾಮಯ್ಯ ಜೊತೆ ಇರುವೆ: ಡಿಕೆ ಶಿವಕುಮಾರ್ ಭರವಸೆ

0
Spread the love

ಹಾಸನ: ನಾನು ಸಾಯುವವರೆಗೂ ಸಿಎಂ ಸಿದ್ದರಾಮಯ್ಯ ಜೊತೆ ಇರುವೆ ಎಂದು ಡಿಕೆ ಶಿವಕುಮಾರ್ ಸಿದ್ದರಾಮಯ್ಯನವರ ಅಭಿಮಾನಿಗಳಿಗೆ ಭರವಸೆ ನೀಡಿದ್ದಾರೆ. ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ  ಬೃಹತ್‌ ಜನ ವಿಕಾಸ ಸಮಾವೇಶ ನಡಯಿತು. ಈ ವೇಳೆ ಮಾತನಾಡಿದ ಅವರು, ತಲೆ ಕೆಡಿಸಿಕೊಳ್ಳಬೇಡಿ ಈ ಬಂಡೆ ಡಿಕೆ ಸಿದ್ದರಾಮಯ್ಯ ಜತೆ ಇದೆ. ಈಗಲೂ ಇರುತ್ತೇನೆ, ನಾಳೆನೂ ಇರುತ್ತೇನೆ, ಸಾಯುವವರೆಗೂ ಇರುವೆ ಎಂದು ಹೇಳಿದರು.

Advertisement

ಇನ್ನೂ ಈ ಹಾಸನದ ಇತಿಹಾಸ ನೋಡಿದರೆ ನೋವಾಗುತ್ತೆ. ಹಲವು ರಾಜಕೀಯ ಕುಟುಂಬಗಳು ನೋವುಂಡಿವೆ. ಹಾಸನಾಂಬೆ ಆ ಹೆಣ್ಣುಮಕ್ಕಳನ್ನು ರಕ್ಷಣೆ ಮಾಡಬೇಕು ಎಂದರು. ನಿಮ್ಮ ಹಾಸನದ ಮಾಜಿ ಸಂಸದರ ಸಾಕ್ಷಿಗುಡ್ಡೆ ಬಗ್ಗೆ ಮಾತನಾಡಲು ಅಸಹ್ಯವಾಗುತ್ತೆ. ವಿಜಯೇಂದ್ರ ಹಾಗೂ ಕುಮಾರಸ್ವಾಮಿಗೆ ಉಪಚುನಾವಣೆಯಲ್ಲಿ ಜನ ಉತ್ತರ ಕೊಟ್ಟಿದ್ದಾರೆ. ಇನ್ನು ಮುಂದೆ ಹಾಸನದ ಏಳು ವಿಧಾನಸಭೆ ಕ್ಷೇತ್ರ ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದರು.


Spread the love

LEAVE A REPLY

Please enter your comment!
Please enter your name here