ರಾಮರಾಜ್ಯ ಮಾಡದಿದ್ದರೆ ರಾಜಕಾರಣದಲ್ಲಿ ಇರಲ್ಲ: ಶಪಥ ಮಾಡಿದ HD ಕುಮಾರಸ್ವಾಮಿ!

0
Spread the love

ಮೈಸೂರು:- ನಾನು ರಾಮರಾಜ್ಯ ಮಾಡದಿದ್ದರೆ ರಾಜಕಾರಣದಲ್ಲಿ ಇರುವುದಿಲ್ಲ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಶಪಥ ಮಾಡಿದ್ದಾರೆ.

Advertisement

ಈ ಸಂಬಂಧ ಮಾತನಾಡಿದ ಅವರು, ಮುಂದೆ ಬಿಜೆಪಿ ಜೊತೆಗೆ ಸೇರಿ 5 ವರ್ಷದ ಸರ್ಕಾರ ತರಬೇಕು. ಆಗ ನಾವು ರಾಮರಾಜ್ಯದ ಸರ್ಕಾರ ಮಾಡಬಹುದು. ನಾನು ರಾಮರಾಜ್ಯ ಮಾಡದಿದ್ದರೆ ರಾಜಕಾರಣದಲ್ಲಿ ಇರುವುದಿಲ್ಲ ಎಂದರು.

ಮುಂದಿನ ಬಾರಿ ಬಿಜೆಪಿ, ಜೆಡಿಎಸ್ ಸರ್ಕಾರ ತಪ್ಪಿಸಲು ಸಾಧ್ಯವಿಲ್ಲ. 2028ಕ್ಕೆ ಅಧಿಕಾರಕ್ಕೆ ಬರುತ್ತೇವೆಂದು ಕಾಂಗ್ರೆಸ್​ನವರು ಹೇಳುತ್ತಾರೆ. 3 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದ್ದೇ ಅಂತಿಮವಲ್ಲ. ಉಪ ಚುನಾವಣೆಯಲ್ಲಿ ಆಡಳಿತ ಪಕ್ಷ ಗೆಲ್ಲುವುದು ಸಾಮಾನ್ಯ. 18 ಶಾಸಕರನ್ನು ಕರೆದೊಯ್ದಿದ್ದ ವೇಳೆ ಬಿಜೆಪಿ 17 ಸ್ಥಾನದಲ್ಲಿ ಗೆದ್ದಿತ್ತು. ನಂತರ ನಡೆದ ಚುನಾವಣೆಯಲ್ಲಿ ಬಿಜೆಪಿ ಎಷ್ಟು ಸ್ಥಾನ ಪಡೆದರು ಎಂದು ಪ್ರಶ್ನಿಸಿದ್ದಾರೆ.

2023ರಲ್ಲಿ ಬಿಜೆಪಿಗೆ ಆದ ಪರಿಸ್ಥಿತಿ ಕಾಂಗ್ರೆಸ್ ಪಕ್ಷಕ್ಕೂ ಬರುತ್ತದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಜೆಡಿಎಸ್​ಗೆ ಉತ್ತಮ ಭವಿಷ್ಯವಿದೆ. ಇದಕ್ಕೆ ಕಾರಣ ಕಾಂಗ್ರೆಸ್ ಸರ್ಕಾರದ ಕೆಟ್ಟ ಆಡಳಿತ. ಹೆಚ್​ಡಿಕೆ ನೇತೃತ್ವದ ಸರ್ಕಾರಕ್ಕೆ ಕಾಂಗ್ರೆಸ್​ನವರೇ ಅವಕಾಶ ಮಾಡಿಕೊಡ್ತಾರೆ ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here