ಹುಬ್ಬಳ್ಳಿ: ಸಿಎಂ ಲೋಕಾಯುಕ್ತ ವಿಚಾರಣೆ ಬಗ್ಗೆ ನಾನು ಕಾಮೆಂಟ್ ಮಾಡುವುದಿಲ್ಲ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಲೋಕಾಯುಕ್ತ ವಿಚಾರಣೆ ಬಗ್ಗೆ ನಾನು ಕಾಮೆಂಟ್ ಮಾಡುವುದಿಲ್ಲ. ಆರೋಪಕ್ಕೆ ಒಳಗಾದವರು ವಿಚಾರಣೆ ಒಳಗಾಗುವುದು ಸಹಜ. ಸಿದ್ದರಾಮಯ್ಯ ಕೂಡಾ ಕಾನೂನಿಗೆ ತಲೆಬಾಗಿ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಹೇಳಿದರು.
ಇನ್ನು ನಮ್ಮ ಪಕ್ಷದ ಜನಪ್ರಿಯ ನೇತಾರ ಯತ್ನಾಳ್ ಅವರು ವಕ್ಫ್ ವಿರುದ್ಧ ಧ್ವನಿ ಎತ್ತಿ ಧರಣಿ ಆರಂಭ ಮಾಡಿದ್ದಾರೆ. ಅದಕ್ಕೆ ಸ್ಪಂದಿಸಿ ಇವತ್ತು ಕೇಂದ್ರದಿಂದ ಕಮಿಟಿ ಬಂದಿದೆ. ಇವತ್ತು ವಿಜಯಪುರ ಜಿಲ್ಲೆಯ ರೈತರಿಗೆ ಯಾವ ರೀತಿ ಅನ್ಯಾಯ ಆಗುತ್ತಿದೆ, ಸಿದ್ದರಾಮಯ್ಯ ಸರ್ಕಾರ ವಕ್ಫ್ಗೆ ಹೇಗೆ ಕುಮ್ಮಕ್ಕು ನೀಡಿದೆ ಅನ್ನುವುದನ್ನು ಹೇಳುವುದಕ್ಕೆ ಇವತ್ತು ಒಂದು ಅವಕಾಶ ಸಿಕ್ಕಿದೆ. ಇದು ನಿಮ್ಮ ಹೋರಾಟದ ಫಲವಾಗಿದೆ. ಯತ್ನಾಳ್ ಅವರಿಗೆ ನಾನು ಅಭಿನಂದನೆ ತಿಳಿಸುತ್ತೇನೆ ಎಂದರು.