ನಾನು ಕಾಂಗ್ರೆಸ್ ರೀತಿ ಕೀಳುಮಟ್ಟದ ರಾಜಕಾರಣ ಮಾಡಲ್ಲ: ಅಶ್ವಥ್‌ ನಾರಾಯಣ್

0
Spread the love

ಮಂಡ್ಯ: ನಾನು ಕಾಂಗ್ರೆಸ್ ರೀತಿ ಕೀಳುಮಟ್ಟದ ರಾಜಕಾರಣ ಮಾಡಲ್ಲ ಎಂದು ಮಾಜಿ ಡಿಸಿಎಂ ಅಶ್ವಥ್‌ ನಾರಾಯಣ್ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ನಾವು ಸರ್ಕಾರ ಮಾಡ್ತೀವಿ ಅಂತ ಎಲ್ಲೂ ಹೇಳಿಲ್ಲ. 65 ಜನ ಇದ್ದವರು ಸರ್ಕಾರ ಮಾಡಲು ಆಗುತ್ತಾ? ನಗು ನಗುತ್ತಾ ಮಾತನಾಡೋದು ನನ್ನ ಅಭ್ಯಾಸ.

Advertisement

ನಾನು ಯಾರ ಮೇಲೂ ದ್ವೇಷ ಮಾಡಲ್ಲ ಕಾಂಗ್ರೆಸ್ ರೀತಿ ಕೀಳುಮಟ್ಟದ ರಾಜಕಾರಣ ಮಾಡಲ್ಲ. ಕಾಂಗ್ರೆಸ್‌ನವರು ನಮ್ಮ ಸಂಪರ್ಕದಲ್ಲಿದ್ದಾರೆ ಅಂತ ನಾವು ಯಾವತ್ತಾದ್ರೂ ಹೇಳಿದ್ದೀವಾ? ಇಲ್ಲಿಂದ ಯಾರು ಹೋಗುವವರು ಇದ್ದಾರೆ ಅವರನ್ನ ಕರ್ಕೊಂಡು ಹೋಗಲಿ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಪಕ್ಷದಲ್ಲಿ ಒಳಜಗಳ ನಡೆಯುತ್ತಿದೆ, ನಮ್ಮನ್ನ ತೋರಿಸಿ ಜಗಳವನ್ನ ಸರಿಪಡಿಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಅವರು ಸಹ ನಮ್ಮನ್ನ ತೋರಿಸಿ ಸಿಎಂ ಸ್ಥಾನ ಭದ್ರ ಮಾಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಬ್ಲ್ಯಾಕ್‌ಮೇಲ್‌ ತಂತ್ರ ಮಾಡ್ತಿದ್ದಾರೆ ಎಂದು ದೂರಿದರಲ್ಲದೇ, ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನ ಅಧಿಕಾರಕ್ಕೆ ತಂದೇ ತರ್ತೀವಿ ಎಂದು ವಿಶ್ವಾಸ ವ್ಯಕ್ತಪಡಿದ್ದಾರೆ.


Spread the love

LEAVE A REPLY

Please enter your comment!
Please enter your name here