ನಾಳೆಯ ಜೆಡಿಎಸ್ ಪಕ್ಷ ಸಂಘಟನಾ ಸಭೆಗೆ ನಾನು ಭಾಗಿಯಾಗಲ್ಲ: ಶಾಸಕ ಜಿಟಿ ದೇವೇಗೌಡ

0
Spread the love

ಮೈಸೂರು: ನಾಳೆಯ ಜೆಡಿಎಸ್​ ಪಕ್ಷ ಸಂಘಟನಾ ಸಭೆಗೆ ನಾನು ಭಾಗಿಯಾಗಲ್ಲ ಎಂದು ಜೆಡಿಎಸ್​ ಶಾಸಕ ಜಿಟಿ ದೇವೇಗೌಡ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಓಡಾಡುತ್ತಿದ್ದೇನೆ. ಹೀಗಾಗಿ ಪಕ್ಷದ ಸಂಘಟನೆ ಹಾಗೂ ಸಭೆಗೆ ಹಾಜರಾಗಲು ಆಗುತ್ತಿಲ್ಲ. ಇದನ್ನು ಹೊರತುಪಡಿಸಿದರೆ ನನಗೆ ಯಾವುದೇ ಬೇಸರ ಕೂಡ ಇಲ್ಲ.

Advertisement

ದಿಶಾ ಸಭೆಗೆ ನಮ್ಮ ನಾಯಕರು ಬಂದ ವೇಳೆ ನಾನು ಹೋಗಬೇಕಿತ್ತು. ಆರೋಗ್ಯ ಸರಿಯಿಲ್ಲದ ಕಾರಣದಿಂದ ನಾನು ಹೋಗಲು ಸಾಧ್ಯವಾಗಿಲ್ಲ ಎಂದು ಅವರು ಹೇಳಿದ್ದಾರೆ.

ಇನ್ನೂ ನನಗೆ ಮನೆಯ ಜವಾಬ್ದಾರಿ ಸ್ವಲ್ಪ ಜಾಸ್ತಿಯಾಗಿದೆ. ಮತ್ತೆ ಕ್ಷೇತ್ರ ನೀವೇ ನೋಡಿದ್ದೀರಿ, 900 ಬಡಾವಣೆಗಳು ಹಸ್ತಾಂತರ ಮಾಡಿದ್ದಾರೆ. ಸುಮಾರು 10 ವರ್ಷ 15 ವರ್ಷದಿಂದ ಮುಡಾನೂ ಅಭಿವೃದ್ಧಿ ಮಾಡಿಲ್ಲ. ನಗರಪಾಲಿಕೆಯೂ ಅಭಿವೃದ್ಧಿಯಾಗಬೇಕಿದೆ. ಶುಕ್ರವಾರ ಮುಖ್ಯಮಂತ್ರಿಗಳ ಸಭೆಯಲ್ಲಿ ಹೇಳಿದ್ದೇವೆ. ಈ ಬಗ್ಗೆ ಕೆಲಸ ಮಾಡುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here