ಬಿಡದಿಗೆ ಗಿಫ್ಟ್ ಕೊಡುವ ಆಸೆಯಿಂದ ಮೆಟ್ರೋ ತರಲು ಪ್ರಯತ್ನ ಮಾಡುತ್ತೇನೆ: ಡಿಕೆ ಶಿವಕುಮಾರ್

0
Spread the love

ರಾಮನಗರ : ಬಿಡದಿ ಭಾಗಕ್ಕೆ ಮೆಟ್ರೋ ತರಲು ಪ್ರಯತ್ನ ಮಾಡುತ್ತೇನೆ. ಬಿಡದಿ ಭಾಗದಲ್ಲಿ ಲಕ್ಷಾಂತರ ಜನರು ಕೆಲಸ ಮಾಡುತ್ತಿದ್ದಾರೆ. ಹೊಸೂರುವರೆಗೂ ಮೆಟ್ರೋ ವಿಸ್ತರಣೆಗೆ ಪ್ರಯತ್ನ ಮಾಡುತ್ತಿದ್ದೇವೆ. ಅದೇ ರೀತಿ ಬಿಡದಿವರೆಗೂ ಮೆಟ್ರೋ ವಿಸ್ತರಿಸಲು ಯೋಚಿಸಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ​ಹೇಳಿದರು. ಬಿಡದಿಯಲ್ಲಿ ನಡೆದ ಟೊಯೋಟಾ‌ ತರಬೇತಿ ಕೇಂದ್ರ ವಿಸ್ತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,

Advertisement

ನಾನು ಬರೀ ಉದ್ಘಾಟನೆ ಮಾಡಲಿಕ್ಕೆ ಬಂದಿಲ್ಲ. ಬಿಡದಿಗೆ ಗಿಫ್ಟ್ ಕೊಡುವ ಆಸೆಯಿಂದ ಈ ಭಾಗಕ್ಕೂ ಮೆಟ್ರೋ ತರಲು ಪ್ರಯತ್ನ ಮಾಡುತ್ತೇನೆ. ಬಾಲಕೃಷ್ಣ ಹಾಗೂ ಸುರೇಶ್​​ರವರು ಬೆನ್ನು ಬಿದ್ದಿದ್ದಾರೆ. ಲಕ್ಷಾಂತರ ಮಂದಿ ಇಲ್ಲಿ ಕೆಲಸ ಮಾಡುತ್ತಿದ್ದಾರೆ. ಹೊಸೂರುವರೆಗೂ ನಾವು ಪ್ರಯತ್ನ ಮಾಡುತ್ತಿದ್ದೇವೆ. ಅದೇ ತರ ಬಿಡದಿವರೆಗೂ ಮೆಟ್ರೋ ತರಲು ಯೋಚಿಸಿದ್ದೇನೆ ಎಂದು ಹೇಳಿದರು.

 


Spread the love

LEAVE A REPLY

Please enter your comment!
Please enter your name here