ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇನೆ: ಅನುರಾಗ್ ಕಶ್ಯಪ್ ವಿವಾದಾತ್ಮಕ ಹೇಳಿಕೆ!

0
Spread the love

ಅನುರಾಗ್ ಕಶ್ಯಪ್, ಬಾಲಿವುಡ್ ಪ್ರತಿಭಾವಂತ ನಿರ್ದೇಶಕರಲ್ಲಿ ಒಬ್ಬರು. ಆದರೆ ಇದೀಗ ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇನೆ, ಏನಿವಾಗ ಎಂದು ಪ್ರಶ್ನಿಸುವ ಮೂಲಕ ವಿವಾದವನ್ನು ಸೃಷ್ಟಿಸಿದ್ದಾರೆ. ಜೋತಿಬಾ ಫುಲೆ ಮತ್ತು ಸಾವಿತ್ರಿ ಬಾಯಿ ಫುಲೆ ಜೀವನ ಆಧರಿಸಿದಫುಲೆಸಿನಿಮಾಕ್ಕೆ ಬ್ರಾಹ್ಮಣ ಸಮುದಾಯ ವಿರೋಧ ವ್ಯಕ್ತಪಡಿಸಿದೆ.

Advertisement

ಇದೇ ಕಾರಣಕ್ಕೆ ಸಿಬಿಎಫ್ಸಿ ಪ್ರಮಾಣ ಪತ್ರ ನೀಡಲು ವಿಳಂಬ ಮಾಡಿದ್ದು ಹಲವು ದೃಶ್ಯಗಳಿಗೆ ಕತ್ತರಿ ಹಾಕುವಂತೆ ಸೂಚಿಸಿದೆ. ಇದೇ ಕಾರಣಕ್ಕೆ ಅನುರಾಗ್ ಕಶ್ಯಪ್ ಸಿಟ್ಟಾಗಿದ್ದು ಸಿಬಿಎಫ್ಸಿ ವಿರುದ್ಧ ಹರಿಹಾಯ್ದಿದ್ದಾರೆ.

ಪಂಜಾಬ್ 95, ತೀಸ್, ಧಡಕ್ 2 ಈಗ ಫುಲೆ ಒಂದರ ಹಿಂದೊಂದು ಸಿನಿಮಾಗಳಿಗೆ ತಡೆ ಒಡ್ಡಲಾಗುತ್ತಿದೆ. ಜಾತೀವಾದಿ, ಧರ್ಮವಾದಿ, ಜನಾಂಗೀಯವಾದಿ ಸರ್ಕಾರ ತನ್ನ ಮುಖವನ್ನು ಕನ್ನಡಿಯಲ್ಲಿ ನೋಡಿಕೊಳ್ಳಲು ಹೆದರುತ್ತಿದೆ. ಅವರಿಗೆ ಯಾವುದು ಸಮಸ್ಯೆ ಎಂದು ಬಹಿರಂಗವಾಗಿ ಹೇಳಲು ಸಹ ಅವರಿಂದ ಸಾಧ್ಯವಾಗುತ್ತಿಲ್ಲಎಂದಿದ್ದರು ಅನುರಾಗ್ ಕಶ್ಯಪ್.

ಪ್ರಧಾನಿ ಮೋದಿ ಅವರು ಹೇಳಿರುವಂತೆ ಭಾರತದಲ್ಲಿ ಜಾತಿ ವ್ಯವಸ್ಥೆಯೇ ಇಲ್ಲ, ಹಾಗಿದ್ದ ಮೇಲೆಫುಲೆಸಿನಿಮಾ ಬಿಡುಗಡೆ ಮಾಡಲು ಸಮಸ್ಯೆ ಏನು? ಜಾತಿ ವ್ಯವಸ್ಥೆ ಇಲ್ಲ ಎಂದಾದಮೇಲೆ ನಿಮಗೇಕೆ ಉರಿಯುತ್ತಿದೆ ಎಂದುಫುಲೆಸಿನಿಮಾ ವಿರೋಧಿಸಿದ್ದ ಬ್ರಾಹ್ಮಣ ಸಮುದಾಯವನ್ನು ಪ್ರಶ್ನೆ ಮಾಡಿದ್ದರು.

ಅಲ್ಲದೆಫುಲೆಸಿನಿಮಾ ಬಿಡುಗಡೆಗೆ ಮುಂಚೆಯೇ ಅವರು ವಿರೋಧ ವ್ಯಕ್ತಪಡಿಸಿದ್ದಾರೆ ಎಂದಾದ ಮೇಲೆ ಅವರು ಸಿನಿಮಾ ನೋಡಿದ್ದು ಹೇಗೆ? ಸಿಬಿಎಫ್ಸಿಯವರೇ ಸಿನಿಮಾ ಲೀಕ್ ಮಾಡಿದ್ದಾರಾ ಎಂದು ಸಹ ಪ್ರಶ್ನೆ ಮಾಡಿದ್ದರು. ಅಲ್ಲದೆ ಅವರ ಪೋಸ್ಟ್ಗೆ ಬಂದ ಕಮೆಂಟ್ ಒಂದಕ್ಕೆಬ್ರಾಹ್ಮಣರ ಮೇಲೆ ಮೂತ್ರ ಮಾಡುತ್ತೀನಿಎಂದು ಪ್ರತಿಕ್ರಿಯೆ ನೀಡಿದ್ದರು.


Spread the love

LEAVE A REPLY

Please enter your comment!
Please enter your name here