ಡಿಕೆಶಿ ನಿಮ್ಮ ತತ್ವದ ವಿರುದ್ಧ ಇದ್ದರೆ ಅವರನ್ನು ಸಸ್ಪೆಂಡ್ ಮಾಡಿ ಬಿಡಿ: ಜಗದೀಶ್ ಶೆಟ್ಟರ್

0
Spread the love

ಹುಬ್ಬಳ್ಳಿ: ಡಿಕೆಶಿ ನಿಮ್ಮ ತತ್ವದ ವಿರುದ್ದ ಇದ್ರೆ ಅವರನ್ನು ಸಸ್ಪೆಂಡ್ ಮಾಡಿಬಿಡಿ ಎಂದು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅವರು ಕುಂಭಮೇಳಕ್ಕೆ ಹೋಗಿರೋದು,ಕೊಯಮತ್ತೂರಗೆ ಹೋಗಿರೋದು ಸಹಜ, ಇದರಲ್ಲಿ ದೊಡ್ಡಸ್ಥಿಕೆ ಏನಿಲ್ಲ ಆದ್ರೆ ಅವರು ನಿಮ್ಮ ಪಕ್ಷದ ತತ್ವ ಸಿದ್ದಾಂತಕ್ಕೆ ವಿರೋಧವಾಗಿದ್ರೆ ಅವರನ್ನು ಪಾರ್ಟಿಯಿಂದ ಹೊರಗೆ ಹಾಕಿ ಎಂದು ಹೇಳಿದರು.

Advertisement

ಕಾಂಗ್ರೆಸ್‍ಗೆ ಹಿಂದೂಗಳ ಬಗ್ಗೆ ದ್ವೇಷ ಇದೆ. ಇದರಿಂದ ಕಾಂಗ್ರೆಸ್ ಉದ್ದಾರ ಆಗಲ್ಲ. ಹಿಂದೂಗಳಿಲ್ಲದೆ ನೀವು ರಾಜಕಾರಣ ಮಾಡ್ತೀವಿ ಅಂದ್ರೆ ಅದು ನಿಮ್ಮ ಹಣೆಬರಹ. ಹಿಂದೂಗಳನ್ನ ಕೀಳಾಗಿ ಕಾಣೋದೆ, ಅವರ ಅವನತಿಗೆ ಕಾರಣ ಎಂದಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ಹಿಂದೂ ವಿರೋಧಿಯಾಗಿವೆ. ಈ ದೇಶ ಹಿಂದೂಗಳ ದೇಶ, ಹಿಂದೂ ರಾಷ್ಟ್ರ ಅನ್ನೋ ಪರಂಪರೆ ಇದೆ. ಕಮ್ಯುನಿಸ್ಟರು ಕೂಡಾ ಹಿಂದೂ ದೇವಾಲಯಕ್ಕೆ ಹೋಗಿದ್ದಾರೆ. ಕಾಂಗ್ರೆಸ್‍ನವರು ಎಷ್ಟೋ ಜನ ಕುಂಭಮೇಳಕ್ಕೆ ಹೋಗಿದ್ದಾರೆ. ರಾಜಕಾರಣಕ್ಕೆ ಧರ್ಮಕ್ಕೆ ತಳಕು ಹಾಕಬಾರದು ಎಂದಿದ್ದಾರೆ.


Spread the love

LEAVE A REPLY

Please enter your comment!
Please enter your name here