ಕೊಪ್ಪಳ:- ಮುಂದೆ ನಾನು ಮಂತ್ರಿ ಆದ್ರೆ ಪುರುಷರಿಗೂ ಉಚಿತ ಬಸ್ ಸೇವೆ ನೀಡುತ್ತೇನೆ ಎಂದು ಬಸವರಾಜ್ ರಾಯರೆಡ್ಡಿ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿ, ನಾನು ಸಚಿವನಾದರೆ ಪುರುಷರಿಗೂ ಬಸ್ ಪ್ರಯಾಣ ಉಚಿತ ಮಾಡುತ್ತೇನೆ. ನನ್ನನ್ನು ಮಂತ್ರಿ ಮಾಡುತ್ತಾರೋ ಇಲ್ಲವೋ ನೋಡೋಣ ಎಂದರು.
ಆರ್ಥಿಕ ಪರಿಸ್ಥಿತಿ ಸುಧಾರಣೆಯಾದರೆ, ಪುರುಷರಿಗೂ ಬಸ್ ಪ್ರಯಾಣ ಉಚಿತ ಮಾಡುತ್ತೇವೆ. ನಾನು ಗ್ಯಾರಂಟಿಗೆ ವಿರೋಧ ಮಾಡಲ್ಲ. ನಾನು ಜನರ ಮುಂದೆ ತಮಾಷೆ ಆಗಿ ಮಾತನಾಡಿದ್ದನ್ನೆಲ್ಲ ಮಾಧ್ಯಮದವರು ವರದಿ ಮಾಡುತ್ತಾರೆ. ನಮ್ಮ ಸರ್ಕಾರದಲ್ಲಿ ಹಣದ ಕೊರತೆ ಇಲ್ಲ. ಎಲ್ಲ ಅಭಿವೃದ್ಧಿ ಕೆಲಸ ಆಗುತ್ತಿವೆ. ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡಾಗ ಹಿಂದಿನ ಸರ್ಕಾರ ಸುಮಾರು 2.5 ಲಕ್ಷ ಕೋಟಿ ರೂ. ಬಿಲ್ ಬಾಕಿ ಉಳಿಸಿತ್ತು. ಈ ಭಾರ ನಮ್ಮ ತಲೆ ಮೇಲೆ ಬಿಜೆಪಿ ಅವರು ಹಾಕಿದ್ದಾರೆ. ಇದರಿಂದ ಒಂದಷ್ಟು ಸಮಸ್ಯೆ ಆಗಿದೆ ಅಷ್ಟೇ ಎಂದರು.