ಹಾವೇರಿ: ಮಹದಾಯಿ ಯೋಜನೆಗೆ ಹಿನ್ನಡೆ ಮಾಡಿದ್ದರೆ ಅದು ಕಾಂಗ್ರೆಸ್ ಪಕ್ಷ ಮಾತ್ರವೇ ಎಂದು ಹಾವೇರಿ ಸಂಸದ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಹದಾಯಿ ವಿಚಾರವಾಗಿ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕರೆದೊಯ್ಯುವುದಾಗಿ ಸಚಿವ ಹೆಚ್ ಕೆ ಪಾಟೀಲ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಮಾತನಾಡಿದ ಅವರು, ಈ ಹಿಂದೆ ಸೋನಿಯಾ ಗಾಂಧಿ ಮಹದಾಯಿ ಹನಿ ನೀರನ್ನು ರಾಜ್ಯಕ್ಕೆ ಕೊಡಲ್ಲ ಎಂದು ಹೇಳಿದ್ರು.
ಟ್ರಿಬ್ಯುನಲ್ ಮಾಡೋ ಅಗತ್ಯ ಇಲ್ಲದಿದ್ದರೂ ಟ್ರಿಬ್ಯುನಲ್ ಮಾಡಿದರು. ಟ್ರಿಬ್ಯುನಲ್ ಚೇರ್ಮನ್ ರಿಗೆ ಒಂದು ಆಫೀಸ್ ಕೂಡಾ ಕೊಡದೆ ವಿಳಂಬ ಮಾಡಿದ್ರು. ಟ್ರಿಬ್ಯುನಲ್ ನಲ್ಲಿ ನಾವೇ ಬರೆದು ಕೊಟ್ಟು, ನಾವು ನಿರ್ಮಿಸಿದ ಇಂಟಲ್ ಲಿಂಕಿಂಗ್ ಕೆನಾಲ್ ಗೆ ಗೋಡೆ ಕಟ್ಟಿದರು ಎಂದೆಲ್ಲಾ ಇತಿಹಾಸದಲ್ಲಿದೆ.
ಈಗ ವೈಲ್ಡ್ ಲೈಫ್ ಬೋರ್ಡ್ ಅನುಮತಿ ತೆಗೆದುಕೊಳ್ಳಬೇಕು. ಅದಕ್ಕೆ ಈಗಾಗಲೇ ಕೇಂದ್ರ ಸಚಿವ ಜೋಶಿಯವರು ಉತ್ತರ ಕೊಟ್ಟಿದ್ದಾರೆ. ನಮಗೆ ಅನುಮತಿ ಸಿಗುತ್ತದೆ ಎಂಬ ವಿಶ್ವಾಸವಿದೆ ಎಂದರು
ಇನ್ನೂ ಬೆಂಗಳೂರಿನಲ್ಲಿ ಬಿಲ್ಡಿಂಗ್ ಮೇಲೆ 40% ಬಿಲ್ಡಿಂಗ್ ಕಟ್ಟುವುದಕ್ಕೆ ಅನುಮತಿ ಕೊಟ್ಟಿದಾರೆ. ಅದಕ್ಕೆ ಅತ್ಯಂತ ಕಡಿಮೆ ದರದ ರೇಟ್ ಫಿಕ್ಸ್ ಮಾಡಿದ್ದಾರೆ. ಹೀಗಾದಾಗ ಡ್ರೇನೇಜ್, ರಸ್ತೆಗಳಿಗೆ ಎಲ್ಲಾ ಸಮಸ್ಯೆಯಾಗುತ್ತದೆ. ಅದು ಅರ್ಬನ್ ಡೆವಲಪ್ಮೆಂಟ್ ಲಾ ವಿರುದ್ದವಿದೆ. ನಾವಿದ್ದಾಗ ಅದನ್ನು ರಿಜೆಕ್ಟ್ ಮಾಡಿದ್ದೆವು ಎಂದರು.
ಬೆಂಗಳೂರಿಗೆ ಶರಾವತಿ ನೀರು ಯೋಜನೆ ವಿಚಾರಕ್ಕೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ಶರಾವತಿ ನದಿ ನೀರಿನ ಬಗ್ಗೆ ನಾನು ಏನು ಪ್ರತಿಕ್ರಿಯೆ ನೀಡಲ್ಲ. ಕಮೆಂಟ್ ಮಾಡಲ್ಲ ಅಂದರೆ ಅದಕ್ಕೆ ಅರ್ಥ ಇದೆ ಎಂದರು.