ಬೆಂಗಳೂರು: ಪ್ರಿಯಾಂಕ್ ಖರ್ಗೆ ಅವರಿಗೆ ಗೌರವ, ಮಾನ, ಮರ್ಯಾದೆ ಇದ್ದರೆ ರಾಜೀನಾಮೆ ಕೊಡಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಬೀದರ್ ಜಿಲ್ಲೆಯ ಯುವ ಗುತ್ತಿಗೆದಾರ ಸಚಿನ್ ಪಂಚಾಳ ಪ್ರಕರಣ ದಿನದಿಂದ ಕಾವೇರುತ್ತಿದ್ದು, ರಾಜಕೀಯ ಕೆಸರರೆಚಾಟಕ್ಕೆ ವೇದಿಕೆ ಆದಂತೆ ಕಾಣುತ್ತಿದೆ. ಇದೀಗ ಈ ವಿಚಾರವಾಗಿ ಮಾತನಾಡಿದ ಆರ್.ಅಶೋಕ್ ಅವರು,
ಸಚಿನ್ ಡೆತ್ನೋಟ್ನಲ್ಲಿ ಪ್ರಿಯಾಂಕ್ ಖರ್ಗೆಯವರ ಹೆಸರೂ ಇದೆ. ಅವರಿಗೆ ಗೌರವ, ಮಾನ, ಮರ್ಯಾದೆ ಇದ್ದರೆ ರಾಜೀನಾಮೆ ಕೊಡಲಿ. ಈಶ್ವರಪ್ಪ ವಿಚಾರದಲ್ಲಿ ಅವರು ಏನು ಮಾತಾಡಿದ್ರು? ಈಗ ಅದನ್ನು ನೆನಪಿಸಿಕೊಳ್ಳಲಿ ಎಂದು ಕಿಡಿಕಾರಿದ್ದಾರೆ.
ಇನ್ನೂ ರಾಜ್ಯದಲ್ಲಿ ಸರಣಿ ಆತ್ಮಹತ್ಯೆಗಳಾಗುತ್ತಿವೆ. ವಾಲ್ಮೀಕಿ ನಿಗಮದ ಚಂದ್ರಶೇಖರ್, ದಾವಣೆಗೆರೆಯಲ್ಲಿ ಒಬ್ಬರು ಪಿಸಿ ಹತ್ಯೆ, ರುದ್ರಣ್ಣ, ಸಚಿನ್ ಅವರ ಆತ್ಮಹತ್ಯೆಯಾಗಿದೆ. ವಿಪಕ್ಷವಾಗಿ ನಾವು ಸಾಕಷ್ಟು ಹೋರಾಟ ಮಾಡಿದ್ದೇವೆ. ಎಲ್ಲಾ ರೀತಿಯ ಹೋರಾಟ ಮಾಡಿ ಕೇಸ್ ಹಾಕಿಸಿಕೊಂಡಿದ್ದೇವೆ ಎಂದಿದ್ದಾರೆ.