ಯಾರಾದ್ರು ದ್ವೇಷ ಭಾಷಣ ಮಾಡಿದ್ರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ: CM ಸಿದ್ದರಾಮಯ್ಯ ಸೂಚನೆ!

0
Spread the love

ಬೆಂಗಳೂರು:- ಯಾರಾದ್ರು ದ್ವೇಷ ಭಾಷಣ ಮಾಡಿದ್ರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ ಎಂದು CM ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ಪೊಲೀಸರ ವಾರ್ಷಿಕ ಸಭೆಯಲ್ಲಿ ಮಾತನಾಡಿದ ಸಿಎಂ, ದ್ವೇಷ ಭಾಷಣ ಮಾಡುವವರ ವಿರುದ್ಧ, ಜನರ-ರಾಜ್ಯದ ನೆಮ್ಮದಿ ಕೆಡಿಸುವವರ ವಿರುದ್ಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬೇಕು. ಅಥವಾ ಯಾರಾದ್ರು ದ್ವೇಷ ಭಾಷಣ ಮಾಡಿರುವವರ ವಿರುದ್ಧ ದೂರು ಕೊಟ್ಟರೂ ಕೇಸ್‌ ದಾಖಲಿಸಿಕೊಂಡು ಕ್ರಮ ಜರುಗಿಸಬೇಕು ಎಂದು ಪೊಲೀಸರಿಗೆ ಖಡಕ್‌ ನಿರ್ದೇಶನ ನೀಡಿದ್ದಾರೆ.

Advertisement

ನೀವು ಕ್ರಮ‌ ತೆಗೆದುಕೊಳ್ಳದಿದ್ದರೆ ನಾವು ನಿಮ್ಮ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ. ನಾವು ವ್ಯವಸ್ಥೆಯನ್ನು ದೂಷಿಸಿಕೊಂಡು ಕೈ ಕಟ್ಟಿಕೊಂಡು ಕೂರೋದಲ್ಲ ಕೆಲಸ ಮಾಡಬೇಕೆಂದು ಎಚ್ಚರಿಕೆ ಕೊಟ್ಟಿದ್ದಾರೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ಪೊಲೀಸರಿಗೆ ಹೊಸ ಮಾದರಿಯ ಟೋಪಿಗೆ ಸಮ್ಮತಿ ಸೂಚಿಸಿದ್ದಾರೆ. ಐದಾರು ರಾಜ್ಯದ ಟೋಪಿಗಳನ್ನು ಪರಿಶೀಲನೆ ಮಾಡಿದ ಸಿಎಂ ತೆಲಂಗಾಣ ರಾಜ್ಯದ ಟೋಪಿಯನ್ನು ಆಯ್ಕೆ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here