ವಿಜಯನಗರ:- ಕೇಂದ್ರ ಸರ್ಕಾರ ನನಗೆ ಅವಕಾಶ ಕೊಡ್ಲಿ, ಪಾಕ್ ಎದುರು ಯುದ್ಧಕ್ಕೆ ಸಿದ್ಧನಿದ್ದೇನೆ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಮೋದಿ, ಅಮಿತ್ ಷಾ, ಕೇಂದ್ರ ಸರ್ಕಾರ ನನಗೆ ಅವಕಾಶ ನೀಡಲಿ, ನಾನು ಯುದ್ಧಕ್ಕೆ ಹೋಗಲು ಸಿದ್ಧ. ಪಾಕಿಸ್ತಾನಕ್ಕೂ ನಮಗೂ ಎಂದಿಗೂ ಸಂಬಂಧವಿಲ್ಲ. ಪಾಕಿಸ್ತಾನ ಯಾವತ್ತಿಗೂ ನಮ್ಮ ಶತ್ರು ದೇಶನೇ. ಕೇಂದ್ರ ಸರ್ಕಾರ ಪಾಕಿಸ್ತಾನದ ಮೇಲೆ ಯುದ್ಧ ಸಾರಲಿ, ಮೋದಿ, ಅಮಿತ್ ಷಾ ಮತ್ತು ಕೇಂದ್ರ ಸರ್ಕಾರ ನನಗೆ ಅವಕಾಶ ಕೊಡಲಿ, ನಾನು ಯುದ್ಧ ಮಾಡೋದಕ್ಕೆ ಸಿದ್ಧ ಎಂದರು.
ನಂತರ ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿ, ಸತ್ತಿರೋರು ರೌಡಿ ಶೀಟರ್ ಅಂತೆ. ಹಿಂದೆ ಕೊಲೆ ಕೇಸ್ ನಲ್ಲಿದ್ರಂತೆ, ಪೊಲೀಸರು ತನಿಖೆ ಮಾಡುತ್ತಾರೆ. ಪ್ರತಿಯೊಬ್ಬರ ಜೀವವೂ ಅಮೂಲ್ಯವೇ , ಬಿಜೆಪಿ ಎಲ್ಲದ್ರಲ್ಲೂ ರಾಜಕಾರಣ ಮಾಡುತ್ತಾರೆ. ಇದು ಅವರ ಚಾಳಿ ಎಂದು ಕಿಡಿಕಾರಿದರು.