ದುಡ್ಡು ಪಡೆದು ಮನೆ ಕೊಟ್ಟರೆ ಹುಳ ಬಿದ್ದು ಸಾಯುತ್ತೇವೆ: ಸಚಿವ ಜಮೀರ್ ಅಹಮದ್

0
Spread the love

ಬೆಂಗಳೂರು: ದುಡ್ಡು ಪಡೆದು ಮನೆ ಕೊಟ್ಟರೆ ಹುಳ ಬಿದ್ದು ಸಾಯುತ್ತೇವೆ‌ ಎಂದು ಬಿಜೆಪಿ ನಾಯಕರ ಆರೋಪಕ್ಕೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಗರು ಹೇಳುವುದೇ ಬೇಡ ನಾನೇ ರಾಜೀನಾಮೆ ‌ನೀಡುತ್ತೇನೆ. ಯಾರ ಬಳಿಯೂ ನಾವು ದುಡ್ಡು ಪಡೆದು ಮನೆ ಕೊಟ್ಟಿಲ್ಲ.

Advertisement

ರಾಮನಗರಕ್ಕೆ ಕೂಡ ಮನೆ ಕೊಟ್ಟಿದ್ದೇವೆ. ಎಲ್ಲರಿಗೂ ಮನೆ ಕೊಟ್ಟಿದ್ದೇವೆ. ದುಡ್ಡು ಪಡೆದು ಮನೆ ಕೊಟ್ಟರೆ ಹುಳ ಬಿದ್ದು ಸಾಯುತ್ತೇವೆ‌. ಬಡವರ ಹಣ ಪಡೆದ್ರೆ ನಮ್ಮ ಮಕ್ಕಳಿಗೆ ಒಳ್ಳೆಯದಾಗುತ್ತಾ?. ಯಾರು ಹಣ ಪಡೆದಿದ್ದಾರೆ ಎಂದು ಪಾಟೀಲ್ ಹೇಳಲಿ. ಅವರ ಮೇಲೆ ಕ್ರಮ ತೆಗೆದುಕೊಳ್ಳೋಣ ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here