ಬೆಂಗಳೂರು:- ನೀರಿನ ಬಾಟಲ್ ಮಾರಾಟ ವಿಚಾರಕ್ಕೆ ರೈಲಿನಲ್ಲಿ ಯುವಕನ ಮೇಲೆಯೇ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.
ಹಾಸನ ಮಾರ್ಗದ ರೈಲಿನಲ್ಲಿ ಈ ಅಮಾನವೀಯ ಘಟನೆ ಜರುಗಿದೆ. ಗೊಮ್ಮಟೇಶ್ವರ ರೈಲು ನಿಲ್ದಾಣದಲ್ಲಿ ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಬಾಟಲ್ ಗಳನ್ನ ಅಕ್ರಮವಾಗಿ ಕೊಡ್ತಾನೆ ಎಂಬ ವಿಚಾರಕ್ಕೆ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ರೈಲಿನ ಗುತ್ತಿಗೆ ಪುಡ್ ರಿಲವರಿ ಸಿಬ್ಬಂದಿಯಿಂದ ಈ ಹಲ್ಲೆ ನಡೆದಿದೆ. ಅಲ್ಲದೇ ಎಲ್ಲಾ ನೀರಿನ ಬಾಟಲಿಗಳನ್ನು ಹೊರಗೆ ಎಸೆಯುವಂತೆ ಧಮ್ಕಿ ಹಾಕಿದ್ದಾನೆ.
ಸ್ಥಳೀಯ ಹಾಗೂ ಆರ್ ಪಿಎಫ್ ಸಿಬ್ಬಂದಿಯ ಗಮನಕ್ಕೆ ತರದೆ ಗುತ್ತಿಗೆ ಸಿಬ್ಬಂದಿಯಿಂದ ಹಲ್ಲೆ ನಡೆಸಲಾಗಿದೆ. ಇದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.



