ಕಲಬುರ್ಗಿ:- ಇಲ್ಲಿನ ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿಯಾಗಿರೋ ಶರಣಬಸಪ್ಪ ಅಪ್ಪ ಅವರು ಶುಕ್ರವಾರ ಲಿಂಗೈಕ್ಯರಾಗಿದ್ದಾರೆ.
ತಮ್ಮ ಕೊನೆಯಾಸೆಯಂತೆ ಶರಣಬಸವೇಶ್ವರರ ದರ್ಶನ ಪಡೆದು ದಾಸೋಹ ಮಹಾ ಮನೆಯಲ್ಲಿ ಲಿಂಗೈಕ್ಯರಾಗಿದ್ದು, ಕುಟುಂಬಸ್ಥರು, ಅಪಾರ ಬಂಧು ಬಳಗ ಹಾಗೂ ಅನುಯಾಯಿಗಳನ್ನ ಅಗಲಿದ್ದಾರೆ. ಅನಾರೋಗ್ಯದಿಂದ ಅಸ್ವಸ್ಥರಾಗಿದ್ದ ಶರಣಬಸಪ್ಪ ಅಪ್ಪ ಅವರನ್ನ ಖಾಸಗಿ ಆಸ್ಪತ್ರೆಯಿಂದ ಮಠಕ್ಕೆ ಶಿಫ್ಟ್ ಮಾಡಲಾಗಿತ್ತು. ಮಠದಲ್ಲೇ ಆರೈಕೆಗೆ ಕುಟುಂಬಸ್ಥರು ನಿರ್ಧರಿಸಿದ್ದರು. ಕೆಲ ದಿನಗಳಿಂದೀಚೆಗೆ ಮಠದಲ್ಲೇ ವೆಂಟಿಲೇಟರ್ನಲ್ಲಿರಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಲಿಂಗೈಕ್ಯರಾಗಿದ್ದಾರೆ.
ಇನ್ನೂ ಶರಣಬಸಪ್ಪ ಅಪ್ಪ ಅವರ ನಿಧನ ವಿಚಾರ ತಿಳಿಯುತ್ತಿದ್ದಂತೆ ಇಲ್ಲಿನ ಭಕ್ತರು ಮಠಕ್ಕೆ ದೌಡಾಯಿಸಿ ಕಂಬನಿ ಮಿಡಿದಿದ್ದಾರೆ. ಇನ್ನು ಸಿಎಂ ಸಿದ್ದರಾಮುಯ್ಯ ಸೇರಿ ಅನೇಕ ಗಣ್ಯರು ಅಪ್ಪ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.