2019ರಲ್ಲಿ ಡಿಕೆಶಿ ಸೊಕ್ಕು, ದುರಾಡಳಿತದಿಂದ ನಾವೆಲ್ಲ ಪಕ್ಷಾಂತರ ಮಾಡಿದ್ದೇವೆ: ರಮೇಶ್ ಜಾರಕಿಹೊಳಿ

0
Spread the love

ಬೆಳಗಾವಿ: ಡಿಸಿಎಂ ಡಿಕೆ ಶಿವಕುಮಾರ್ ಸಿಡಿ ಮಾಸ್ಟರ್ ಮೈಂಡ್. ಸಿಡಿನೇ ಡಿಕೆಶಿ ಶಕ್ತಿಯಾಗಿದ್ದು ಆತ ಒಬ್ಬ ಪುಕ್ಕಲ, ಮೋಸಗಾರ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಉಪಮುಖ್ಯಮಂತ್ರಿ ವಿರುದ್ಧ ಕಿಡಿಕಾರಿದ್ದಾರೆ.

Advertisement

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನಕಪುರದಲ್ಲಿ ನಡೆದ ಎಲ್ಲಾ ಚುನಾವಣೆ ಹೊಂದಾಣಿಕೆ ಆಗಿವೆ. ರಾಜ್ಯದಲ್ಲಿ ಆಪರೇಷನ್ ಕಮಲ ಎಲ್ಲವೂ ಸುಳ್ಳು. ಜನರ ಗಮನ ಬೇರೆಡೆ ಸೆಳೆಯಲು ಈ ರೀತಿಯ ಯತ್ನ ಮಾಡಲಾಗುತ್ತಿದೆ. ಲಾಟರಿ ಮಂತ್ರಿ, ಶಾಸಕರು ಯಾವಾಗಲೂ ಡೇಂಜರ್ ಎಂದರು.

ಡಿಸಿಎಂ ಡಿಕೆ ಶಿವಕುಮಾರ್ ನಾಟಕ ಮಂಡಳಿ ಬಿಜೆಪಿ ನಾಯಕರ ಹೆಸರು ಕೆಡಿಸುತ್ತಿದ್ದಾರೆ. 50, 100 ಕೋಟಿ ಎಂದು ಅಪಪ್ರಚಾರ ಮಾಡಲಾಗಿದೆ. 2019ರಲ್ಲಿ ಡಿಕೆಶಿ ಸೊಕ್ಕು, ದುರಾಡಳಿತದಿಂದ ನಾವೆಲ್ಲ ಪಕ್ಷಾಂತರ ಮಾಡಿದ್ದೇವೆ.

ಆಪರೇಷನ್ ಕಮಲ ಎಲ್ಲವೂ ನಡೆಯುತ್ತಿಲ್ಲ ಎಲ್ಲವೂ ಸುಳ್ಳು. ಗ್ಯಾರಂಟಿ ಯೋಜನೆ ಫೇಲ್ ಆಗಿದೆ. ಹೀಗಾಗಿ ಜನರ ದಿಕ್ಕು ಬದಲು ಮಾಡಲು ಈ ರೀತಿಯಲ್ಲಿ ಮಾಡುತ್ತಿದ್ದಾರೆ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here