ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯ: ಬೆಂಗಳೂರಿನಲ್ಲಿ ಹೆಚ್ಚಾಯ್ತು ಬೀದಿ ದನಗಳ ಉಪಟಳ!

0
Spread the love

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಬಿಎಂಪಿ ನಿರ್ಲಕ್ಷ್ಯದಿಂದ ಬೀದಿ ದನಗಳ ಉಪಟಳ ಹೆಚ್ಚಾಗುತ್ತಿದೆ. ಆದರೆ ಇದರ ನಿಯಂತ್ರಣಕ್ಕೆ ಮುಂದಾಗಲೂ ಬಿಬಿಎಂಪಿ ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದಾರೆ.

Advertisement

ಎಸ್ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿದನಗಳ ಹಾವಳಿಯಿಂದಾಗಿ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಜೊತೆಗೆ ಅಪಘಾತಗಳ ಸಂಖ್ಯೆ ಹೆಚ್ಚಳ ಆಗುತ್ತಿದೆ. ಕೋರಮಂಗಲದ ಸರ್ಜಾಪುರ ಮುಖ್ಯ ರಸ್ತೆಯ ಮಧ್ಯದಲ್ಲೆ ಬೀದಾಡಿ ದನಗಳು ಕುಳಿತುಕೊಂಡಿರುತ್ತವೆ. ಇದರಿಂದ ವಾಹನ ಸವಾರರಿಗೆ ತೊಂದರೆ ಆಗುತ್ತಿದೆ. ಹೀಗಿದ್ದರು. ಕೂಡ ಪಾಲಿಕೆ ಅಧಿಕಾರಿಗಳು ಬೀದಿ ದನಗಳ ಕಂಟ್ರೊಲ್ ಮಾಡುತ್ತಿಲ್ಲ ಎಂದು ಆಟೋ ಚಾಲಕರೊಬ್ಬರು ಆಕ್ರೋಶ ಹೊರ ಹಾಕಿದ್ದಾರೆ.

ಪಿಕ್ ಅವರ್ ಸಂದರ್ಭದಲ್ಲಿ ದಾರಿಗೆ ಅಡ್ಡಲಾಗಿ ಬರುವ ದನಗಳಿಂದ ಟ್ರಾಫಿಕ್ ಜಾಮ್ ಉಂಟಾದರೆ ಮತ್ತೊಂದೆಡೆಗೆ ಶಾಲಾ ಕಾಲೇಜು ವಿದ್ಯಾರ್ಥಿಗಳು ರಸ್ತೆಯಲ್ಲಿ ಓಡಾಡಬೇಕೆಂದರು ದನಗಳ ಭಯ‌ ಪಡುತ್ತಾರೆ ಯಾವಾಗ ಬಂದು ಗುದ್ದುತ್ತವೆ, ಏನು ಮಾಡ್ತವೆ ಅಂತ ಗೊತ್ತಾಗಲ್ಲ.

ಬೀದಿ ದನಗಳನ್ನ ಗೋಶಾಲೆಗೆ ಬಿಡಬೇಕು. ಈ ಕೆಲಸ ಪಾಲಿಕೆ ಅಧಿಕಾರಿಗಳು ಮಾಡಬೇಕು ಆದರೆ ಅವರು ಮಾಡ್ತಿಲ್ಲ. ಇದರಿಂದಾಗಿ ವಾಹನ ಸವಾರರ ಓಡಾಟಕ್ಕೆ ತುಂಬಾ ತೊಂದರೆ ಆಗುತ್ತೆ ಹೀಗಾಗಿ ಬೀದಿ ದನಗಳ ನಿಯಂತ್ರಣ ಮಾಡಲೆಬೇಕು ಎಂದು ವಾಹನ ಸವಾರರು ಹೇಳಿದ್ದಾರೆ.

ಹೀಗಾಗಿ ಇನ್ನಾದರು ಪಾಲಿಕೆ ಅಧಿಕಾರಿಗಳು ಎಚ್ಚೆತ್ತುಕೊಂಡು ಬೀದಿ ದನಗಳ ಉಪಟಳಕ್ಕೆ ಬ್ರೇಕ್ ಹಾಕ್ತಾರಾ ಕಾದುನೋಡಬೇಕಾಗಿದೆ.


Spread the love

LEAVE A REPLY

Please enter your comment!
Please enter your name here