ಆಡಳಿತದ ದೃಷ್ಟಿಯಿಂದ ರಾಮನಗರ ಜಿಲ್ಲೆ ಇರುವುದೇ ಸೂಕ್ತ. ಸರ್ಕಾರಿ ಕೆಲಸಕ್ಕೆ ಬೆಂಗಳೂರಿಗೆ ಬಂದು ಹೋಗೋದು ದೊಡ್ಡ ಸವಾಲು. ಬೆಂಗಳೂರು ನಗರದಲ್ಲಿ ಒಕ್ಕಲಿಗ ಸಮುದಾಯದವರು ಜಾಸ್ತಿ ಇದ್ದಾರೆ. ಆಡಳಿತದ ಹತೋಟಿ ಕೈತಪ್ಪಿ ಹೋಗುತ್ತೆ ಅಂತಾ ಮನಸ್ಸಿನಲ್ಲಿ ಇರಬಹುದು.
ಅದು ರಾಜಕೀಯ ಮಹಾತ್ವಾಕಾಂಕ್ಷೆ ಇರುವ ವ್ಯಕ್ತಿ ಆಡುವ ಮಾತು. ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಏನು ತೊಂದರೆ ಇದೆ ಅಂತಾ ಗೊತ್ತಿಲ್ಲ. ಮುಂದೆ ರಾಮನಗರ ಜಿಲ್ಲೆಯ ಜನರು ಪ್ರತಿಭಟನೆ ಮಾಡಬಹುದು ಎಂದು ಬೆಂಗಳೂರಿನಲ್ಲಿ ಬಿಜೆಪಿ ಎಂಎಲ್ಸಿ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.



