ಬೆಳ್ಳಂ ಬೆಳಗ್ಗೆ ಲೋಕಾ ಬೇಟೆ- ಬೆಂಗಳೂರು ಸೇರಿ ರಾಜ್ಯದ ಹಲವೆಡೆ ದಾಳಿ!

0
Spread the love

ಬೆಂಗಳೂರು;- ಭ್ರಷ್ಟ ಸರ್ಕಾರಿ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಇಂದು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿ ಭ್ರಷ್ಟರ ಚಳಿ ಬಿಡಿಸಿದ್ದಾರೆ. ಬೆಂಗಳೂರು, ಚಿತ್ರದುರ್ಗ, ಕಲಬುರಗಿ, ರಾಯಚೂರು, ಹಾಸನ, ಬೀದರ್, ದೇವದುರ್ಗ ಸೇರಿದಂತೆ ಹಲವು ಜಿಲ್ಲೆಗಳ ಭ್ರಷ್ಟ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Advertisement

ಇನ್ನೂ ಬೆಂಗಳೂರು ಒಂದರಲ್ಲೇ ಒಟ್ಟು 11 ಕಡೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೆಆರ್‌ ಪುರದಲ್ಲಿನ ಎಆರ್‌ಒ ಎಆರ್ ಓ ಚಂದ್ರಪ್ಪ ಬಿರಜ್ಜನವರ್ ಮನೆ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಎಆರ್‌ಒಗೆ ಸಂಬಂಧಪಟ್ಟ ಮೂರು ಕಡೆ ದಾಳಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಬಿಬಿಎಂಪಿ ಹೆಗ್ಗನಹಳ್ಳಿ ವಾರ್ಡ್ ನ ಆರ್.ಆರ್.ನಗರ ವಲಯಾಧಿಕಾರಿಯಾಗಿರುವ ಚಂದ್ರಪ್ಪ. ಕೆ.ಆರ್.ಪುರಂ ನಿವಾಸದಲ್ಲಿ ದಾಳಿ ನಡೆಸಿ ಪೊಲೀಸರಿಂದ ಶೋಧಕಾರ್ಯ ಮುಂದುವರಿದಿದೆ


Spread the love

LEAVE A REPLY

Please enter your comment!
Please enter your name here