HomeKarnataka Newsಜನರನ್ನು ಒಳಗೊಂಡಿರುವ ಆರ್ಥಿಕ ಅಭಿವೃದ್ಧಿ ಮತ್ತು ಎಲ್ಲರನ್ನು ಮುಟ್ಟುವಂತಹ ಬಜೆಟ್: ಬೊಮ್ಮಾಯಿ

ಜನರನ್ನು ಒಳಗೊಂಡಿರುವ ಆರ್ಥಿಕ ಅಭಿವೃದ್ಧಿ ಮತ್ತು ಎಲ್ಲರನ್ನು ಮುಟ್ಟುವಂತಹ ಬಜೆಟ್: ಬೊಮ್ಮಾಯಿ

For Dai;y Updates Join Our whatsapp Group

Spread the love

ಬೆಂಗಳೂರು: ಭಾರತವನ್ನು ವಿಶ್ವದ 3 ನೇ ಆರ್ಥಿಕ ಶಕ್ತಿಯನ್ನಾಗಿ ಮಾಡಲು ವಿಕಸಿತ ಭಾರತ ಕಟ್ಟುವಂತ ಅಭಿವೃದ್ದಿ ಶೀಲವಾಗಿರುವ ಮಾದರಿ ಬಜೆಟ್ ನ್ನು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಕೇಂದ್ರದ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ವಿಶ್ವದ ಎಲ್ಲ ರಾಷ್ಟ್ರಗಳು ಜಾಗತಿಕ ಆರ್ಥಿಕ ಸಂಕಷ್ಟದಲ್ಲಿರುವಾಗ ಭಾರತ ತನ್ನ ಆರ್ಥಿಕ ಪ್ರಗತಿಯನ್ನು ಮುಂದುವರೆಸಿಕೊಂಡು ಹೋಗುವಂತಹ ಅಭಿವೃದ್ಧಿ ಪರವಾದ ಬಜೆಟನ್ನು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದಾರೆ. ನಾಗರಿಕರ ಸಾಮರ್ಥ್ಯವನ್ನು ದೇಶದ ಆರ್ಥಿಕ ಚಟುವಟಿಕೆಯಲ್ಲಿ ಅಳವಡಿಸಲು ಯೋಜನೆಗಳನ್ನು ಹಲವಾರು ನೀತಿಗಳನ್ನು ಈ ಬಜೆಟ್ ನಲ್ಲಿ ಘೋಷಿಸಿದ್ದಾರೆ.

ಭವಿಷ್ಯದ ಚಾಂಪಿಯನ್ ಗಳಿಗಾಗಿ ಸುಮಾರು 10 ಸಾವಿರ ಕೋಟಿ ರೂ. ಆರ್ಥಿಕ ನೆರವು ಕೊಡುವಂತಹ ಯೋಜನೆ ಮಾಡಿದ್ದಾರೆ. ಆರ್ಥಿಕ ಅಭಿವೃದ್ಧಿ ಸ್ಥೀರಿಕರಣ ಮತ್ತು ಹಣದುಬ್ಬರ ನಿಯಂತ್ರಣ ಮಾಡುವುದು, ಜನರ ಆಶೋತ್ತರಗಳನ್ನು ಈಡೇರಿಸುವುದರ ಜೊತೆಗೆ 7.4 ಆರ್ಥಿಕ ಬೆಳವಣಿಗೆಯನ್ನು ಮುಂದುವರೆಸಿ ಎಲ್ಲ ಜನರನ್ನು ಒಳಗೊಂಡಿರುವ ಆರ್ಥಿಕ ಅಭಿವೃದ್ಧಿ ಮತ್ತು ಎಲ್ಲರನ್ನು ಮುಟ್ಟುವಂತಹ ಬಜೆಟ್ ಆಗಿದೆ ಎಂದು ಹೇಳಿದ್ದಾರೆ.

ಸಣ್ಣ ಕೈಗಾರಿಕೆಗೆ ವಿಶೇಷವಾದ ಒತ್ತು ಕೊಟ್ಟಿದ್ದಾರೆ. ಟೆಕ್ಸ್ ಟೈಲ್, ಚರ್ಮದ ಉತ್ಪನ್ನಗಳು, ಐಟಿ ಬಿಟಿ ಡಾಟಾ ಸೆಂಟರ್ ಗಳಿಗೆ ಬಹಳಷ್ಟು ಒತ್ತು ಕೊಟ್ಟಿದ್ದಾರೆ. ವಿಶೇಷವಾಗಿ ನಗರ ಮೂಲಸೌಕರ್ಯ ಕ್ಕೆ ಬಹಳ ಪ್ರಾಮುಖ್ಯತೆ ಕೊಟ್ಟಿದ್ದಾರೆ. ಎರಡು ಮತ್ತು ಮೂರನೇ ಹಂತದ ನಗರಗಳಿಗೆ ಬಹಳಷ್ಟು ಒತ್ತು ಕೊಟ್ಟಿದೆ.

ಸುಮಾರು 12.5 ಲಕ್ಷ ಕೋಟಿ ರೂ. ಗಳನ್ನು ಕೇಂದ್ರ ಸರ್ಕಾರ ವಿವಿಧ ಯೋಜನೆಗಳಲ್ಲಿ ಹೂಡುತ್ತಿದೆ. ವಿತ್ತೀಯ ಕೊರತೆಯನ್ನು 4.3ಗೆ ನಿಯಂತ್ರಣ ಮಾಡಿರುವುದು ದೊಡ್ಡ ಸಾಧನೆ. ಮೂಲ ಸೌಕರ್ಯದಲ್ಲಿ ರಸ್ತೆಹೈ ಸ್ಪೀಡ್ ರೈಲುಗಳು, 20 ಜಲ ಸಾರಿಗೆ ಒತ್ತು ಕೊಟ್ಟಿರುವುದು ಸಾರಿಗೆಯಲ್ಲಿ ಹೊಸ ಆಯಾಮ ತೆರೆದಂತಾಗಿದೆ.

ಅಭಿವೃದ್ಧಿ ಪಥದಲ್ಲಿ ಭಾರತವನ್ನು ಆರ್ಥಿಕವಾಗಿ ವಿಶ್ವದ ಮೂರನೇ ಸ್ಥಾನಕ್ಕೆ ತೆಗೆದುಕೊಂಡು ಹೋಗುವ ವಿಕಸಿತ ಭಾರತ ಕಟ್ಟುವಂತ ಅಭಿವೃದ್ದಿ ಶೀಲವಾಗಿರುವ ಮಾದರಿ ಬಜೆಟ್ ನ್ನು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದಾರೆ ಎಂದು ಹೇಳಿದರು.

ವಿದೇಶಗಳಿಂದ ಬರುವ ವಸ್ತುಗಳಿಗೆ ಸಂಪೂರ್ಣ ತೆರಿಗೆ ಫ್ರೀ ಮಾಡಿದ್ದಾರೆ. ನಾಲ್ಕು ಕರ್ತವ್ಯ ಪಥ ಅಂತ ಹೇಳಿದ್ದಾರೆ. ಮೊದಲನೆಯದಾಗಿ ಆರ್ಥಿಕ ಬೆಳವಣಿಗೆ, ಎರಡನೇಯದು ಸಬ್ ಬೆ ಸಾಥ್ ಸಬ್ ಕೆ ವಿಕಾಸ್ ಎನ್ನುವ ತತ್ವದಲ್ಲಿ ಮಹಿಳೆಯರು, ಯುವಕರು ರೈತರಿಗೆ ಎಲ್ಲರನ್ನು ಒಳಗೊಂಡಿರುವ ಈ ಬಜೆಟ್ ಇದಾಗಿದೆ ಎಂದು ಹೇಳಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!