HomeGadag Newsಕ್ರಿಯಾಯೋಜನೆಯಲ್ಲಿ ಕಾಮಗಾರಿಗಳನ್ನು ಅಳವಡಿಸಿಕೊಳ್ಳಿ: ತಾ.ಪಂ ಇಒ ಚಂದ್ರಶೇಖರ ಕಂದಕೂರು

ಕ್ರಿಯಾಯೋಜನೆಯಲ್ಲಿ ಕಾಮಗಾರಿಗಳನ್ನು ಅಳವಡಿಸಿಕೊಳ್ಳಿ: ತಾ.ಪಂ ಇಒ ಚಂದ್ರಶೇಖರ ಕಂದಕೂರು

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ನರೇಗಾ ಯೋಜನೆಯಲ್ಲಿ ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳ ಜೊತೆಗೆ ಶಾಲೆಗೆ ಸಂಬಂಧಿಸಿದ ಕಾಮಗಾರಿಗಳನ್ನು ಕಡ್ಡಾಯವಾಗಿ ಕ್ರಿಯಾಯೋಜನೆಯಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ.ಕಂದಕೂರ ಹೇಳಿದರು.

ತಾಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಣಚಮಟ್ಟಿ ಗ್ರಾಮದಲ್ಲಿ 2026-27ನೇ ಸಾಲಿನ ನರೇಗಾ ಕ್ರಿಯಾ ಯೋಜನೆ ತಯಾರಿಸುವ ಕುರಿತು ಗುರುವಾರ ನಡೆದ ಗ್ರಾಮ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಜಾಬ್ ಕಾರ್ಡ್ ಹೊಂದಿರುವ ಕೂಲಿಕಾರರು ತಮ್ಮ ಜೀವಿತಾವಧಿಯಲ್ಲಿ 5 ಲಕ್ಷ ರೂಪಾಯಿವರೆಗೂ ವೈಯಕ್ತಿಕ ಸೌಲಭ್ಯಗಳನ್ನು ಪಡೆಯಬಹುದು. ಅದರಲ್ಲಿ ಕೃಷಿ ಹೊಂಡ, ಎರೆಹುಳು ಘಟಕ, ಕೊಳವೆ ಬಾವಿ ಮರುಪೂರಕ ಘಟಕ, ಮೇಕೆ ಶೆಡ್, ದನದ ದೊಡ್ಡಿ, ತೋಟಗಾರಿಕೆ ಇಲಾಖೆಯಲ್ಲಿ ಪಪ್ಪಾಯಿ ಮತ್ತು ಬಾಳೆ ಹೊರತುಪಡಿಸಿ ಉಳಿದಂತೆ ಮಾವು, ಕರಿಬೇವು, ಸೀಬೆ, ನುಗ್ಗೆ, ತೆಂಗು, ಸೀತಾಫಲ ಸೇರಿದಂತೆ ದೀರ್ಘಕಾಲಿಕ ಬೆಳೆಗಳನ್ನು ನರೇಗಾದಲ್ಲಿ ಮಾಡಿಕೊಳ್ಳಲು ಅವಕಾಶವಿದೆ. ಇಂತಹ ಕಾಮಗಾರಿಗಳನ್ನು ಕ್ರಿಯಾ ಯೋಜನೆಯಲ್ಲಿ ಸೇರಿಸಿಕೊಳ್ಳಬಹುದು. ಆಸಕ್ತ ರೈತರು ಕ್ರಿಯಾ ಯೋಜನೆಯಲ್ಲಿ ಹೆಸರನ್ನು ಅಳವಡಿಸಿಕೊಂಡು ನಂತರ ಕೆಲಸ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಸಮುದಾಯ ಕಾಮಗಾರಿಗಳಾದ ಸಿಸಿ ರಸ್ತೆ, ಚರಂಡಿ, ಕೆರೆ ಅಭಿವೃದ್ಧಿ, ಸ್ಮಶಾನ ಅಭಿವೃದ್ಧಿ, ಮಳೆ ನೀರು ಕೊಯ್ಲು, ಎನ್.ಆರ್.ಎಲ್.ಎಂ. ಶೆಡ್ ನಿರ್ಮಾಣ ಸೇರಿದಂತೆ ಇತರೆ ಕಾಮಗಾರಿಗಳನ್ನು ಮಾಡಿಕೊಳ್ಳಲು ನರೇಗಾದಲ್ಲಿ ಅವಕಾಶವಿದ್ದು, ಯಾವ ಗ್ರಾಮಕ್ಕೆ ಯಾವ ಕಾಮಗಾರಿಗಳು ಅವಶ್ಯಕವಾಗಿವೆ ಅಂತಹವುಗಳನ್ನು ಆದ್ಯತೆಯ ಮೇರೆಗೆ ಕ್ರಿಯಾಯೋಜನೆಯಲ್ಲಿ ಅಳವಡಿಸಲು ಸೂಚಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೂನಾಬಾಯಿ ರಾಠೋಡ, ಸದಸ್ಯರಾದ ಲಿಂಬಣ್ಣ ಗಡಾದ, ದೊಡ್ಡಮ್ಮ ಅಗಸಿಮನಿ, ಲಕ್ಷö್ಮವ್ವ ಕೌಡಕಿ, ಶೇಖಪ್ಪ ಪೂಜಾರ, ದುರಗಪ್ಪ ಕೊತಬಾಳ, ಪರಪ್ಪ ತೊಂಡಿಹಾಳ, ಸಂಗಪ್ಪ ಪೂಜಾರ, ರೇಷ್ಮೆ ಇಲಾಖೆಯ ಸುರೇಶ ಡಾಣಕ, ತೋಟಗಾರಿಕೆ ಇಲಾಖೆಯ ಮಹಾಂತೇಶ ಅಂಟಿನ್ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳು, ನರೇಗಾ ಹಾಗೂ ಪಂಚಾಯಿತಿ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಹಾಜರಿದ್ದರು.

ಪಂಚಾಯತ ಅಭಿವೃದ್ಧಿ ಅಧಿಕಾರಿ ಮಂಜುನಾಥ ಮೇಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಶಾಲೆ ಅಭಿವೃದ್ಧಿಗೆ ಮೊದಲ ಆದ್ಯತೆ
ನರೇಗಾ ಯೋಜನೆಯಡಿ ಶಾಲೆಗೆ ಬೇಕಾಗುವಂತ ಶೌಚಾಲಯ, ಅಡುಗೆ ಕೋಣೆ, ಕಂಪೌಂಡ್, ಆಟದ ಮೈದಾನಕ್ಕೆ ಮೊದಲ ಆದ್ಯತೆ ನೀಡಲಾಗಿದೆ. ಪ್ರತಿ ಶಾಲೆಗಳಲ್ಲಿ ಶೌಚಾಲಯ, ಅಡುಗೆ ಕೋಣೆ, ಕಂಪೌಂಡ್, ಆಟದ ಮೈದಾನ ಪರಿಶೀಲಿಸಿ, ಯಾವ ಶಾಲೆಗೆ ಯಾವುದು ಅವಶ್ಯಕವಾಗಿದೆ ಅವುಗಳನ್ನು ಕಡ್ಡಾಯವಾಗಿ ಹೆಸರನ್ನು ಸೇರಿಸಿ ಕ್ರಿಯಾ ಯೋಜನೆಯಲ್ಲಿ ತಯಾರಿಸಬೇಕು ಎಂದು ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!