HomeGadag Newsಕಾನೂನು ಉಲ್ಲಂಘನೆಗೆ ದಂಡದ ಮೊತ್ತ ಹೆಚ್ಚಳ

ಕಾನೂನು ಉಲ್ಲಂಘನೆಗೆ ದಂಡದ ಮೊತ್ತ ಹೆಚ್ಚಳ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ :  `ಆಕರ್ಷಕ ಉತ್ಪನ್ನಗಳು ಕರಾಳ ಉದ್ದೇಶಗಳು’ ಎಂಬ ಘೋಷಣೆಯೊಂದಿಗೆ ಗದಗ ಜಿಲ್ಲಾಡಳಿತ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಗದಗ, ಜಿಲ್ಲಾ ಪೊಲೀಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾರಾಗೃಹ ಗದಗ, ಜಿಲ್ಲಾ ಸಮೀಕ್ಷಾ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಗದಗ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ಗದುಗಿನ ಜಿಲ್ಲಾ ಕಾರಾಗೃಹದಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಹಿರಿಯ ದಿವಾಣಿ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಈ ಮೊದಲು ಇದ್ದ 18 ವರ್ಷಕ್ಕಿತ ಕಡಿಮೆ ವಯಸ್ಸಿನವರಿಗೆ ತಂಬಾಕು ಉತ್ಪನ್ನಗಳ ನಿಷೇಧವನ್ನು 21 ವರ್ಷಕ್ಕೆ ಏರಿಸಿ ದಂಡದ ಮೊತ್ತ 1000 ರೂವರೆಗೆ ಹೆಚ್ಚಿಸಲಾಗಿದೆ. ಶಿಕ್ಷಣ ಸಂಸ್ಥೆಗಳ ಸುತ್ತ ತಂಬಾಕು ಮಾರಾಟ ನಿಷೇಧ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ ಈ ಮೊದಲು 200 ರೂಪಾಯಿವರೆಗೆ ದಂಡ ವಿಧಿಸಲಾಗುತ್ತಿತ್ತು. ಸದರಿ ತಿದ್ದುಪಡಿಯ ನಂತರ 1000 ರೂವರಗೆ ದಂಡದ ಮೊತ್ತವನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

ಎಲ್‌ಎಡಿಸಿ ಸಹಾಯಕ ಕಾನೂನು ನೆರವು ಅಭಿರಕ್ಷಕಿ ಜಿ.ಬಿ. ಗೌರಿ ಮಾತನಾಡುತ್ತ, ಕಾನೂನುಗಳು ಪರಿಣಾಮಕಾರಿ ಅನುಷ್ಠಾನಕ್ಕೆ ಕೇವಲ ಅಧಿಕಾರಿಗಳ ಪಾತ್ರವಷ್ಟೇ ಅಲ್ಲದೆ, ಸಾರ್ವಜನಿಕರು ಕಾನೂನಿನ ಬಗ್ಗೆ ಗೌರವ ಪಾಲನೆ ಮಾಡಿದಾಗ ಸುವ್ಯವಸ್ಥಿತ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯವೆಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕಾರಾಗೃಹ ಅಧೀಕ್ಷಕ ಈರಣ್ಣ ರಂಗಾಪೂರ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಮ್.ಬಿ. ಸಂಕದ, ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್. ನೀಲಗುಂದ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೂಪಸೇನ್ ಚವ್ಹಾಣ, ವಿಠ್ಠಲ್ ನಾಯಕ, ಜಿಲ್ಲಾ ಕಾರ್ಯಕ್ರಮ ಸಂಯೋಜಕ ಡಾ. ರವಿ. ಕಡಗಾವಿ, ವಿರೇಶ ಮದಕಟ್ಟಿ, ಶಿವಕುಮಾರ ಬಗಾಡೆ ಮುಂತಾದವರಿದ್ದರು.

ಬಿ.ಸಿ. ಚಿತ್ತರಗಿ ಪ್ರಾರ್ಥಿಸಿದರು.ವಿಠ್ಠಲ್ ನಾಯಕ ಎಫ್.ಎಲ್.ಸಿ ಸ್ವಾಗತಿಸಿದರು. ಎನ್.ಟಿ.ಸಿ.ಪಿ ಜಿಲ್ಲಾ ಸಲಹೆಗಾರರಾದ ಗೋಪಾಲ ಸುರಪುರ ಕಾರ್ಯಕ್ರಮ ನಿರೂಪಿಸಿದರು.

ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ವೆಂಕಟೇಶ ರಾಥೋಡ್ ಮಾತನಾಡುತ್ತ, ಮಾರುಕಟ್ಟೆಯಲ್ಲಿ ಆಕರ್ಷಕವಾದ ವಿವಿಧ ಸುಗಂಧಿತ ಹಾಗೂ ಆಕರ್ಷಕ ಪ್ಯಾಕ್‌ಗಳ ಮೂಲಕ ತಂಬಾಕು ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿ ಜನರು ಹೆಚ್ಚು ಆಕರ್ಷಿತರಾಗಿ ವ್ಯಸನಕ್ಕೆ ಬಲಿಯಾಗುವಂತೆ ಮಾಡುವ ಉದ್ಯಮಗಳ ಮುಖವಾಡ ಬಿಚ್ಚಿಡುವುದು ಈ ವರ್ಷದ ಘೋಷವಾಕ್ಯದ ಉದ್ದೇಶವಾಗಿದೆ. ತಂಬಾಕು ವ್ಯಸನದಿಂದ ಆರೋಗ್ಯ ಮೇಲೆ ಬಹಳಷ್ಟು ದುಷ್ಪರಿಣಾಮಗಳು ಉಂಟಾಗುತ್ತವೆ. ತಂಬಾಕು ವ್ಯಸನಿಗಳಿಗೆ ನಮ್ಮ ಜಿಲ್ಲೆಯಲ್ಲಿ ಜಿಲ್ಲಾ ಆಸ್ಪತ್ರೆಯ ರೂ.ನಂ 182ರಲ್ಲಿ ತಂಬಾಕು ವ್ಯಸನ ಮುಕ್ತ ಕೇಂದ್ರ ಲಭ್ಯವಿದ್ದು, ಈ ಕೇಂದ್ರದಲ್ಲಿ ಉಚಿತ ಆಪ್ತ ಸಮಾಲೋಚನೆ, ಔಷಧೋಪಚಾರ ಸೇವೆ ನೀಡಲಾಗುತ್ತಿದೆ ಎಂದು ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!