ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಾಳೆ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ಚಾಂಪಿಯನ್ ಟ್ರೋಫಿಯ ಅಂತಿಮ ಪಂದ್ಯ ನಡೆಯಲಿದೆ.
ಟೂರ್ನಿಯಲ್ಲಿ ಆಡಿರುವ ನಾಲ್ಕು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಅಜೇಯವಾಗಿ ಫೈನಲ್ಗೆ ಲಗ್ಗೆ ಇಟ್ಟಿರುವ ಭಾರತ ಫೈನಲ್ನಲ್ಲೂ ಗೆದ್ದು ಪ್ರಶಸ್ತಿ ಮುಡಿಗೇರಿಸಿ ಕೊಳ್ಳಬೇಕು ಎಂಬ ದೃಢಸಂಕಲ್ಪ ತೊಟ್ಟಿದೆ. ಮತ್ತೊಂದೆಡೆ ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್ಗೆ ಲಗ್ಗೆ ಇಟ್ಟಿರುವ ಕಿವೀಸ್ ತಂಡ, ಚಾಂಪಿಯನ್ಸ್ ಟ್ರೋಫಿಯ ಮೇಲೆ ಕಣ್ಣಿಟ್ಟಿದೆ.
ಉಭಯ ತಂಡಗಳು ಇದುವರೆಗೆ ನಾಲ್ಕು ಬಾರಿ ಐಸಿಸಿ ಆಯೋಜಿತ ಟೂರ್ನಿಗಳಲ್ಲಿ 4 ಬಾರಿ ಉಭಯ ತಂಡಗಳು ಮುಖಾಮುಖಿಯಾಗಿವೆ. ಇದರಲ್ಲಿ ನ್ಯೂಜಿಲೆಂಡ್ ತಂಡ 3 ಬಾರಿ ಗೆದ್ದಿದ್ದರೆ, ಟೀಮ್ ಇಂಡಿಯಾ ಒಮ್ಮೆ ಮಾತ್ರ ಗೆಲುವು ಸಾಧಿಸಿದೆ.
ಈ ಹಿಂದೆ 2000ನೆ ಇಸವಿಯಲ್ಲಿ ನಡೆದಿದ್ದ ಚಾಂಪಿಯನ್ಸ್ ಟ್ರೋಫಿಯ ಫೈನಲ್ನಲ್ಲಿ ಕಿವೀಸ್ ಪಡೆ ಭಾರತವನ್ನು ಸೋಲಿಸಿತ್ತು. ಇದೀಗ ಫೈನಲ್ನಲ್ಲಿ ಗೆದ್ದು 25 ವರ್ಷದ ಹಳೆ ಸೇಡು ತೀರಿಸಿಕೊಳ್ಳಲು ಭಾರತ ಸಜ್ಜಾಗಿದೆ. ಇದಕ್ಕಾಗಿ ಬಲಿಷ್ಠ ತಂಡದಿಂದ ಕಣಕ್ಕಿಳಿಯಲಿದೆ.
ತಂಡದಲ್ಲಿ ಬದಲಾವಣೆ ಸಾಧ್ಯತೆ:ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ಇದೆ. ಕುಲ್ದೀಪ್ ಯಾದವ ಸ್ಥಾನಕ್ಕೆ ಅರ್ಷದೀಪ್ ಆಡುವ ಸಾಧ್ಯತೆಗಳಿವೆ.