ಬೆಳಗಾವಿಯಲ್ಲಿ ಕೆರೆಗೆ ಹಾರಿ ಭಾರತೀಯ ಸೇನೆ ಯೋಧ ಆತ್ಮಹತ್ಯೆ!

0
Spread the love

ಬೆಳಗಾವಿ: ಕೆರೆಗೆ ಹಾರಿ ಭಾರತೀಯ ಸೇನೆ ಯೋಧ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕು ಪರಸನಟ್ಟಿ ಗ್ರಾಮದಲ್ಲಿ ನಡೆದಿದೆ. ಚೆನ್ನಮ್ಮನ ಕಿತ್ತೂರು ತಾಲೂಕು ದೇಗಾಂವ ಗ್ರಾಮದ ಯೋಧ ನರೇಶ ಯಲ್ಲಪ್ಪ ಆಗಸರ(28) ಮೃತ ದುರ್ಧಯವಿಯಾಗಿದ್ದು, ಕಳೆದ ಐದು ವರ್ಷದಿಂದ  ಭಾರತೀಯ ಸೇನೆಯಲ್ಲಿ ಯೋಧ ನರೇಶ ಸೇವೆ ಸಲ್ಲಿಸುತ್ತಿದ್ದರು.

Advertisement

ನರೇಶ ಅವರು 20 ದಿನಗಳ ಹಿಂದೆ ರಜೆ ಮೇಲೆ ಊರಿಗೆ ಬಂದಿದ್ದರು. ನಿನ್ನೆ ಕೆಲಸಕ್ಕೆ ಹೋಗುವುದಾಗಿ ಹೇಳಿ ಹೊರಟ ಅವರು, ಕೆರೆಗೆ ಹಾರಿದ್ದಾರೆ. ವೈವಾಹಿಕ ಜೀವನದಲ್ಲಿ ಏರುಪೇರಿಂದ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರೋ‌ ಶಂಕೆಯಾಗಿದ್ದು,

ಘಟನಾ ಸ್ಥಳಕ್ಕೆ ಕಿತ್ತೂರು ಪಿಎಸ್‌ಐ ಪ್ರವೀಣ ಗಂಗೋಳ, ಪ್ರವೀಣ ಕೋಟಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳಿಂದ ಮೃತದೇಹದ ಹುಡುಕಾಟ ನಡೆಯುತ್ತಿದೆ. ನಿನ್ನೆ ಸಂಜೆಯಿಂದಲೂ ಕೆರೆಯಲ್ಲಿ ಶೋಧ ಕಾರ್ಯ ಮಾಡಲಾಗುತ್ತಿದೆ.


Spread the love

LEAVE A REPLY

Please enter your comment!
Please enter your name here