ಇಂದಿರಾಗಾಂಧಿ ಸಂವಿಧಾನ ವಿರೋಧಿಸಿ ತುರ್ತು ಪರಿಸ್ಥಿತಿಯ ಘೋಷಣೆ ಮಾಡಿದ್ರು: ಕಾಂಗ್ರೆಸ್ ವಿರುದ್ಧ ಅನ್ನದಾನಿ ವಾಗ್ದಾಳಿ

0
Spread the love

ಬೆಂಗಳೂರು: ಇಂದಿರಾಗಾಂಧಿ ಸಂವಿಧಾನ ವಿರೋಧಿಸಿ ತುರ್ತು ಪರಿಸ್ಥಿತಿಯ ಘೋಷಣೆ ಮಾಡಿದ್ರು ಎಂದು ಕಾಂಗ್ರೆಸ್ ವಿರುದ್ಧ ಜೆಡಿಎಸ್ ಎಸ್ಸಿ ಘಟಕದ ಅಧ್ಯಕ್ಷ, ಮಾಜಿ ಶಾಸಕ ಅನ್ನದಾನಿ ವಾಗ್ದಾಳಿ ‌ನಡೆಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನವರ ಮನಸು ಕೊಳಕಾಗಿದೆ. ಅಂಬೇಡ್ಕರ್ ವಿರೋಧಿಗಳು ಕಾಂಗ್ರೆಸ್ ಅವರು.

Advertisement

ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಕಾಂಗ್ರೆಸ್ ಅವರು. ಇಂದಿರಾಗಾಂಧಿ ಸಂವಿಧಾನ ವಿರೋಧಿಸಿ ತುರ್ತು ಪರಿಸ್ಥಿತಿಯ ಘೋಷಣೆ ಮಾಡಿದ್ರು ಅಂತ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ‌ನಡೆಸಿದರು.

ರಾಹುಲ್‌ ಗಾಂಧಿ ಅವರು ಸಂವಿಧಾನದ ಪುಸ್ತಕ ಹಿಡಿದು ಪ್ರಮಾಣ ವಚನ ಸ್ವೀಕಾರ ಮಾಡಿದ್ರು. ಸಂವಿಧಾನ ರಕ್ಷಣೆ ನಾವೇ ಮಾಡೋದು ಅಂದರು‌. ಈಗ ಡಿಕೆ ಶಿವಕುಮಾರ್ ಸಂವಿಧಾನ ಬದಲಾವಣೆ ಮಾಡ್ತೀನಿ ಅಂದರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸುಮ್ಮನೆ ಇದ್ದಾರೆ. ಡಿಕೆಶಿ ಹೇಳಿಕೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಮಾತಾಡಬೇಕು ಅಂತ ಆಗ್ರಹ ಮಾಡಿದ್ರು.


Spread the love

LEAVE A REPLY

Please enter your comment!
Please enter your name here