ಅಮಾನವೀಯ ಕೃತ್ಯ: ಗೋ ರಕ್ಷಣೆಗೆ ಮುಂದಾದ ಹಿಂದೂ ಕಾರ್ಯಕರ್ತರಿಗೆ ಹಿಗ್ಗಾಮುಗ್ಗಾ ಥಳಿತ!

0
Spread the love

ಬೆಳಗಾವಿ:- ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಗೋ ರಕ್ಷಣೆ ಮಾಡಲು ಮುಂದಾದ ಹಿಂದೂ ಕಾರ್ಯಕರ್ತರ ಮೇಲೆ ಅಮಾನವೀಯ ರೀತಿಯಲ್ಲಿ ಹಲ್ಲೆ ನಡೆಸಿದ ಘಟನೆ ಜರುಗಿದೆ.

Advertisement

ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೋ ಶಾಲೆಯಿಂದ ಗೋವುಗಳನ್ನು ತೆಗೆದುಕೊಂಡು ಹೋಗಿದ್ದನ್ನು ನೋಡಿ 5 ಮಂದಿ ಶ್ರೀರಾಮ ಸೇನೆಯ ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ. ಪ್ರಶ್ನೆ ಮಾಡಿದ್ದಕ್ಕೆ ದಲ್ಲಾಳಿಗಳು ಮರಕ್ಕೆ ಕಟ್ಟಿ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಥಳಿಸುತ್ತಿರುವ ವಿಡಿಯೋ ಸಧ್ಯ ವೈರಲ್ ಆಗುತ್ತಿದೆ.

ಈ ಬಗ್ಗೆ ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ವಿಠ್ಠಲ್ ಗಡ್ಡಿ ಮಾತನಾಡಿ, ಕರ್ನಾಟಕದಲ್ಲಿರುವುದು ಸಿದ್ದರಾಮಯ್ಯ ಸರ್ಕಾರ ಅಲ್ಲ. ಇದು ಖಾನ್ ಸರ್ಕಾರ. ಪೊಲೀಸರಿಗೆ ದೂರು ಕೊಡಲು ಹೋದರೆ ರೇಪ್ ಮಾಡಿದ್ದೀರಿ ಎಂದು ಧಮಕಿ ಹಾಕಿದ್ದಾರೆ.

ಕಾನೂನು ರೀತಿಯಲ್ಲಿ ಥಳಿಸಿದವರಿಗೆ ಶಿಕ್ಷೆಯಾಗಬೇಕು. ಸರಿಯಾಗಿ ಕಾನೂನು ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.


Spread the love

LEAVE A REPLY

Please enter your comment!
Please enter your name here