ಹಾವೇರಿ: ಉತ್ತರ ಕರ್ನಾಟಕ ಭಾಗದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಆಗಿರುವ ಅನ್ಯಾಯವನ್ನು ಸರ್ಕಾರ ಸರಿಪಡಿಸಬೇಕು. ಸರ್ಕಾರದ ನೂತನ ಪರೀಕ್ಷಾ ನೀತಿಯಿಂದ ಶಿಕ್ಷಣದ ಗುಣಮಟ್ಟ ಹಾಳಾಗುತ್ತಿದೆ. ಶಿಕ್ಷಣಕ್ಕೆ ಸರ್ಕಾರ ಹೆಚ್ಚು ಒತ್ತು ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇಂದು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರ ಗ್ರಾಮದಲ್ಲಿ ನವೋದಯ ವಿದ್ಯಾ ಸಂಸ್ಥೆಯ ಶ್ರೀ ಬಸವರಾಜ ಬಳ್ಳಾರಿ ಪೂರ್ವ ಪ್ರಾಥಮಿಕ ಶಾಲೆ, ಶ್ರೀಮತಿ ಸಿದ್ದಮ್ಮ ಮೈಲಾರ ಹಿರಿಯ ಪ್ರಾಥಮಿಕ ಶಾಲೆ, ಶ್ರೀ ವೀರಯ್ಯ ಬ ಕಳಸೂರಮಠ ಪ್ರೌಢ ಶಾಲೆ, ಶ್ರೀಮತಿ ಸುಶೀಲಮ್ಮ ಹಾವೇರಿಮಠ ಆಂಗ್ಲ ಮಾಧ್ಯಮ ಶಾಲೆಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ ಶಾಲಾ ವಾರ್ಷಿಕೋತ್ಸವದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ನಮ್ಮ ಹಿರಿಯರಾದ ಬಳ್ಳಾರಿಯವರ ಪ್ರೀತಿ ವಿಶ್ವಾಸ ಹಳೆ ಸಂಬಂಧ ನಮ್ಮನ್ನು ಇಲ್ಲಿ ಕರೆದು ತಂದಿದೆ. ಅವರು ಸರಳ ಸಜ್ಜನಿಕೆ ಯಜಮಾನರು ನನಗೆ ಬಹಳಬದೊಡ್ಡ ಆಶಿರ್ವಾದ ಮಾಡಿದ್ದಾರೆ. ನಾನು ಮೊದಲು ಇಲ್ಲಿ ಬಂದಾಗ ಸಾಕಷ್ಟು ವಿರೋಧ ವ್ಯಕ್ತವಾಯಿತು. ಅವರು ಇಡಿ ಬ್ಯಾಡಗಿ ತಾಲೂಕು ಗ್ರಾಮ ಪಂಚಾಯಿತಿ, ತಾಲೂಕು, ಜಿಲ್ಲಾ ಪಂಚಾಯತಿ ತಿರುಗಿ ಚುನಾವಣೆ ಮಾಡಿದರು. ಅವರ ಋಣ ಮರೆಯಲಿ ಸಾಧ್ಯವಿಲ್ಲ ಎಂದು ಹೇಳಿದರು.
ಈ ಸಂಸ್ಥೆ ಕಟ್ಟಲು ಹಲವಾರು ಜನರು ಸಹಾಯ ಮಾಡಿದ್ದಾರೆ. ಮೈಲಾರ ಮಹದೇವಪ್ಪ ಸ್ವಾತಂತ್ರ್ಯ ಹೋರಾಟದಲ್ಲಿ ದೊಡ್ಡ ಪಾತ್ರ ವಹಿಸಿದ್ದರು. ಅವರಿಗೆ ಎಷ್ಟು ಮಹತ್ವ ಸಿಗಬೇಕಿತ್ತು ಅಷ್ಟು ಮಹತ್ವ ಸಿಗಲಿಲ್ಲ. ಬ್ರಿಟೀಷರಿಗೆ ಅವರು ಸಿಂಹ ಸ್ವಪ್ನವಾಗಿದ್ದರು. ಬ್ರಿಟಿಷರು ಅವರನ್ನು ಮೊಸದಿಂದ ಕೊಂದರು. ಸ್ವಾತಂತ್ರ್ಯ ನಂತರ ಮಹದೇವ ಬಣಕಾರ ವೈಚಾರಿಕ ಕ್ರಾಂತಿ ಮಾಡಿದ್ದಾರೆ.
ಅವರ ಹೆಸರಿನಲ್ಲಿ ಪ್ರಾಥಮಿಕ ಶಾಲೆ, ಡಾ. ಕಳಸೂರ ಮಠ ಅವರ ಹೆಸರಿನಲ್ಲಿ ಹೈಸ್ಕೂಲ್ ಹಾವೇರಿ ಮಠ ಆಂಗ್ಲ ಮಾಧ್ಯಮ ಶಾಲೆಗೆ ಸಹಾಯ ಮಾಡಿದ್ದಾರೆ. ಇಲ್ಲಿ ಒಂದು ಸಾವಿರ ಮಕ್ಕಳು ಕಲಿಯುತ್ತಿದ್ದಾರೆ ಎಂದರೆ ದೊಡ್ಡ ಸಾಧನೆ. ಗ್ರಾಮೀಣ ಮಟ್ಟದಲ್ಲಿ ಗುಣಮಟ್ಟದ ಶಿಕ್ಷಣ ಕೊಡುವುದು ಸವಾಲು ಶಾಲೆಗೆ ಎಷ್ಟು ಸಹಾಯ ಮಾಡಿದರೂ ಕಡಿಮೆಯೇ ಶಾಲೆ ಸ್ಥಾಪನೆ ಮಾಡಿದರೆ ಮುಂದಿನ ಪೀಳಿಗೆಗೆ ಡಿಫಾಜಿಟ್ ಇಟ್ಟ ಹಾಗೆ. ಅದು ಬಹಳ ದೊಡ್ಡ ಕೆಲಸ. ಅತ್ಯಂತ ಶ್ರದ್ದೆಯಿಂದ ಈ ಕೆಲಸ ಮಾಡುತ್ತ ಬಂದಿದ್ದಾರೆ ಎಂದರು.



