ಮಡಿಕೇರಿ: ನಾಡಗೀತೆ ಹಾಗೂ ರಾಷ್ಟ್ರಗೀತೆಗೆ ಗೌರವ ಸೂಚಿಸೋದು ನಮ್ಮ ಕರ್ತವ್ಯ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಅಧ್ಯಕ್ಷತೆಯಲ್ಲಿ ಮಡಿಕೇರಿಯ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಕೊಡಗು ಜಿಲ್ಲಾ ಕೆಡಿಪಿ ಸಭೆಯಲ್ಲಿ ನಾಡಗೀತೆಗೆ ಅವಮಾನ ಮಾಡಿದ ಪ್ರಸಂಗ ಸಾಕಷ್ಟೂ ಮುಜುಗರಕ್ಕೆ ಕಾರಣವಾಯಿತು.
ಸಭೆಯ ಆರಂಭದಲ್ಲಿ ಅಧಿಕಾರಿಗಳು ನಾಡಗೀತೆಯ ರೆಕಾರ್ಡ್ ಅನ್ನು ಪ್ಲೇ ಮಾಡಿದ್ರು. ಆದ್ರೆ ಗೀತೆಯಲ್ಲಿ ಸರ್ವ ಜನಾಂಗದ ಶಾಂತಿಯ ತೋಟ ಪ್ಯಾರದ ಭಾಗವನ್ನು ತುಂಡೀರಿಸಲಾಗಿತ್ತು. ಇದರಿಂದ ಕೆಂಡಾಮಂಡಲರಾದ ಎಂಎಲ್ ಸಿ ಭೋಜೇಗೌಡ, ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡರು.
ನಾಡಗೀತೆ ಸರಿಯಾಗಿ ಹಾಕಿಲ್ಲ. ನಿಯಮದಂತೆ ಗೀತೆಯನ್ನು ಹಾಕಬೇಕಾಗಿತ್ತು. ಹೀಗೆ ಕಟ್ ಮಾಡಿ ಎಡಿಟ್ ಮಾಡಿ ಹಾಕುವ ಬದಲು ಮಕ್ಕಳಿಂದ ಹಾಡಿಸಬಹುದಿತ್ತಲ್ವಾ ಅಂತ ಖಾರವಾಗಿ ಪ್ರಶ್ನಿಸಿದರು. ಅಲ್ಲದೆ ನಾಡಗೀತೆ ತುಂಡೀರಿಸಿ ರೆಕಾರ್ಡ್ ಮಾಡಿದ ಮತ್ತು ಅದನ್ನ ಪರಿಶೀಲಿಸಿ ಸಭೆಯಲ್ಲಿ ಹಾಕಿಸಿದ ಅಧಿಕಾರಿ ಮತ್ತು ಸಿಬ್ಬಂದಿ ಸಸ್ಪೆಂಡ್ಗೆ ಒತ್ತಾಯಿಸಿದರು.