ವಿಜಯಸಾಕ್ಷಿ ಸುದ್ದಿ, ಗದಗ : ಮುಖ್ಯಮಂತ್ರಿ ಸಿದ್ದರಾಮಯ್ಯರು ಮಂಡಿಸಿದ ೨೦೨೪-೨೫ರ ಬಜೆಟ್ ಸಮಸ್ತ ಜನಾಂಗಗಳ ಅಭಿವೃದ್ಧಿಯ ಬಜೆಟ್ ಆಗಿದ್ದು, ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿಯ ಪರವಾಗಿ ಬಜೆಟ್ ಮಂಡನೆ ಆಗಿದೆ ಎಂದು ಕಾಂಗ್ರೆಸ್ ಮುಖಂಡ ಸೈಯದ್ ಖಾಲಿದ್ ಕೊಪ್ಪಳ ಸಂತಸ ವ್ಯಕ್ತಪಡಿಸಿದ್ದಾರೆ.
Advertisement
ರಾಜ್ಯದ ಜನರಿಗೆ ೫ ಗ್ಯಾರಂಟಿಗಳನ್ನು ಪೂರೈಸುವ ಮೂಲಕ ಐತಿಹಾಸಿಕ ಬಜೆಟ್ ಮಂಡನೆಯಾಗಿದ್ದು, ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರ, ಮಹಿಳೆಯರ ಹಾಗೂ ಬಡವರ ಅಭಿವೃದ್ಧಿಯ ಪರವಾಗಿ ಸದಾಕಾಲ ಇದೆ ಎಂದು ಬಜೆಟ್ ಮುಖಾಂತರ ತಿಳಿಸಿದೆ. ಗದಗ ಜಿಲ್ಲೆಯ ಅಭಿವೃದ್ಧಿಗಾಗಿಯೂ ಬಜೆಟ್ನಲ್ಲಿ ಅವಕಾಶ ನೀಡಿದ್ದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲರಿಗೂ ಅವರು ಅಭಿನಂದನೆ ಸಲ್ಲಿಸಿದ್ದಾರೆ.