ವಿಜಯಸಾಕ್ಷಿ ಸುದ್ದಿ, ಗದಗ: ಯಾವುದೇ ದೇಶದ ಆರ್ಥಿಕ ಪ್ರಗತಿಗೆ ಬೌದ್ಧಿಕ ಆಸ್ತಿ ಹಕ್ಕುಗಳು ಮೂಲಾಧಾರವಾಗಿದ್ದು, ಇದು ಹೊಸ ಆವಿಷ್ಕಾರಗಳಿಗೆ ಮತ್ತು ಸೃಜನಶೀಲತೆಗೆ ಪ್ರೋತ್ಸಾಹ ನೀಡುತ್ತದೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ಧಾರವಾಡ ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕರಾದ ಪ್ರೊ. ಕರಿಮುನ್ನಿಸಾ ಸಯ್ಯದ್ ಹೇಳಿದರು.
ಅವರು ಹುಲಕೋಟಿಯ ಕೆ.ಎಚ್. ಪಾಟೀಲ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ‘ಬೌದ್ಧಿಕ ಆಸ್ತಿ ಹಕ್ಕುಗಳು’ ಕುರಿತು ಒಂದು ದಿನದ ರಾಜ್ಯಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಗಳಾದ ಧಾರವಾಡದ ಉನ್ನತ ಶಿಕ್ಷಣ ಅಕಾಡೆಮಿಯ ಡೀನ್ ಡಾ. ಅರುಂಧತಿ ಕುಲಕರ್ಣಿ ಮಾತನಾಡಿ, ಪೇಟೆಂಟ್ಗಳು, ಟ್ರೇಡ್ಮಾರ್ಕ್ಗಳು, ಕೃತಿಸ್ವಾಮ್ಯ, ಕೈಗಾರಿಕಾ ವಿನ್ಯಾಸಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ವಿವರವಾಗಿ ಉಪನ್ಯಾಸ ನೀಡಿದರು.
ಗದುಗಿನ ಕೆ.ಎಲ್.ಇ. ಸೊಸೈಟಿಯ ಎಸ್.ಎ. ಮಾನ್ವಿ ಕಾನೂನು ಮಹಾವಿದ್ಯಾಲಯದ ಶಿವಮೂರ್ತಯ್ಯ ಜಿ. ರೇಶ್ಮಿ ಮತ್ತು ಸಹಜಾನಂದ ಕೊಡತಗೇರಿ ಅವರು ಮೂಲಭೂತ ಹಕ್ಕುಗಳು, ಕಾನೂನು ತಿಳುವಳಿಕೆ, ಆನ್ಲೈನ್ ಕೃತಿಸ್ವಾಮ್ಯ ಉಲ್ಲಂಘನೆ ಕುರಿತು ಮಾತನಾಡಿದರು.
ಪ್ರಾಂಶುಪಾಲ ಪ್ರೊ. ಸುಧಾ ಕೌಜಗೇರಿ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಚಾಲಕ ಡಾ. ಜಿತೇಂದ್ರ ಜಹಾಗೀರದಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಾಗಾರದಲ್ಲಿ ಬೋಧಕ ಸಿಬ್ಬಂದಿಗಳಾದ ಬಸವರಾಜ ಬಿ., ಪ್ರೊ. ಲಕ್ಷ್ಮಣ ಮುಳಗುಂದ, ಡಾ. ಸಾರಿಕಾ ಪಾಟೀಲ, ರಮೇಶ್ ಹುಲಕುಂದ, ಡಾ. ಅರುಣಕುಮಾರ, ಸಾವಿತ್ರಿ ಟಿ., ಶ್ವೇತಾ ಪಾಲನಕರ, ಮಹಾಂತೇಶ, ಹುಸೇನಭಾಷಾ, ಡಾ. ಶ್ರೀಶ ವಿಠ್ಠಲ, ವಿಜಯಕುಮಾರ, ಮನೋಜಕುಮಾರ, ಸುಭಾಸ ಹರಿಹರ, ಬುಳ್ಳಪ್ಪ, ವಿವಿಧ ಕಾಲೇಜುಗಳಿಂದ ಆಗಮಿಸಿದ ಪ್ರಾಧ್ಯಾಪಕರು, ಪ್ರಾಂಶುಪಾಲರುಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮಹಾನಂದಾ ಹಿರೇಮಠ ಹಾಗೂ ಭೀಮೇಶ ಕಾರ್ಯಕ್ರಮವನ್ನು ನಿರೂಪಿಸಿದರು. ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ಉಲ್ಲಾಸ ಶೆಟ್ಟಿ ಸ್ವಾಗತಿಸಿದರು. ಕಲಾ ವಿಭಾಗದ ಮುಖ್ಯಸ್ಥ ಮತ್ತು ಎನ್.ಎಸ್.ಎಸ್. ಸಂಯೋಜಕ ಪ್ರೊ. ಅಪ್ಪಣ್ಣ ಹಂಜೆ ವಂದಿಸಿದರು.



