ಯಾದಗಿರಿ:- ಅಂತರ್ಜಾತಿ ವಿವಾಹಕ್ಕೆ ಮನೆಯವರು ಅಡ್ಡಿ ಪಡಿಸಿದ ಹಿನ್ನೆಲೆ ಪ್ರೇಮಿಗಳು ಪೊಲೀಸರ ಮೊರೆ ಹೋದ ಘಟನೆ ಜರುಗಿದೆ.
ಜಿಲ್ಲೆಯ ಶಹಾಪುರ ತಾಲೂಕಿನ ಹುಲಕಲ್ ಗ್ರಾಮದ ರವಿಕಿರಣ್ ಎಂಬಾತ್ ಧಾರವಾಡ ಮೂಲದ ಸುಪ್ರೀತಾ ಎಂಬಾಕೆಯನ್ನ ಪ್ರೀತಿಸುತ್ತಿದ್ದಾನೆ. ಪರಸ್ಪರ ಪ್ರೀತಿ ಮಾಡಿದ ಜೋಡಿ ಈಗ ಮದುವೆಗೆ ಮುಂದಾಗಿದೆ. ಆದ್ರೆ, ಯುವಕ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ್ರೆ, ಯುವತಿ ಜಂಗಮ ಸಮುದಾಯಕ್ಕೆ ಸೇರಿದ್ದಾಳೆ.
ಇದೆ ಕಾರಣಕ್ಕೆ ಯುವತಿ ಕುಟುಂಬಸ್ಥರು ಮದುವೆಗೆ ಒಪ್ಪುತ್ತಿಲ್ಲ. ಮೇಲ್ನೋಟಕ್ಕೆ ಮದುವೆ ಮಾಡಿಸುತ್ತೆವೆ ಎಂದು ಹೇಳುತ್ತಿದ್ದಾರೆ. ಆದರೆ ಮದುವೆ ಹೆಸರಲ್ಲಿ ಏನಾದರೂ ಮಾಡುತ್ತಾರೆ ಎಂದು ಪ್ರೇಮಿಗಳಿಗೆ ಭಯ ಶುರುವಾಗಿದೆ.
ಯಾದಗಿರಿ ಮೂಲದ ರವಿಕಿರಣ್ ಸಹೋದರ ಧಾರವಾಡದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾನೆ. ಅದೇ ಕಾಲೇಜಿನಲ್ಲಿ ಸುಪ್ರೀತಾ ಕೂಡ ಪದವಿ ಓದುತ್ತಿದ್ದಾಳೆ. ಸಹೋದರನನ್ನ ನೋಡಿಕೊಂಡು ಮಾತಾಡಿಸಲು ಹೋದಾಗ ರವಿಕಿರಣ್ಗೆ ಸುಪ್ರೀತಾ ಪರಿಚಯವಾಗಿದ್ದಾಳೆ.
ಇದೆ ವೇಳೆ ಪರಿಚಯ ಸ್ನೇಹಕ್ಕೆ ತಿರುಗಿದೆ. ಕೆಲ ತಿಂಗಳುಗಳ ಬಳಿಕ ಸ್ನೇಹ ಪ್ರೀತಿಯಾಗಿ ಬದಲಾಗಿದೆ. ಹೀಗಾಗಿ ಪರಸ್ಪರ ಫೋನ್ ನಲ್ಲಿ ಕಳೆದ ಒಂದು ವರ್ಷದಿಂದ ಮಾತಾಡುತ್ತಾ ಬಂದಿದ್ದಾರೆ. ಕೊನೆಗೆ ಇಬ್ಬರು ಮದುವೆಯಾಗಲು ಸಹ ಸಿದ್ದರಾಗಿದ್ದರು. ಈ ವಿಚಾರ ಸುಪ್ರೀತಾ ಪೋಷಕರ ಮುಂದೆ ಹೇಳಿದ್ದಾಳೆ. ಆದ್ರೆ, ಪೋಷಕರು ಮದುವೆಗೆ ವಿರೋಧ ವ್ಯಕ್ತ ಪಡಿಸಿದ್ದಾರೆ. ಹೀಗಾಗಿ ಕೊನೆಗೆ ಇಬ್ಬರು ಮನೆ ಬಿಟ್ಟು ಬಂದು ಮದುವೆಯಾಗಲು ನಿರ್ಧಾರ ಮಾಡಿದ್ದಾರೆ.