ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾಧಿಕಾರಿಗಳ ಸಭಾ ಭವನದಲ್ಲಿ ಮಂಗಳವಾರ ಡೆಂಗೀ ದೈನಂದಿನ ನಿಗಾವಣೆಗಾಗಿ `ಅಂತರ್ ಇಲಾಖಾ ಸಮನ್ವಯ ಸಮಿತಿಯ ಸಭೆ’ಯು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು.

Advertisement

ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿ, ಡೆಂಗೀ ರೋಗವನ್ನು ನಿಯಂತ್ರಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ಇಲಾಖೆಯೊಂದಿಗೆ ವಿವಿಧ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕೆಂದು ಕರೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಮಾತನಾಡಿ, ವಾಡಿಕೆಯಂತೆ ಮಳೆಗಾಲ ಪ್ರಾರಂಭವಾಗಿದ್ದು, ಸೊಳ್ಳೆಗಳು ಹೆಚ್ಚಿನ ಪ್ರಮಾಣದಲ್ಲಿ ಉತ್ಪತ್ತಿಗೊಳ್ಳುತ್ತವೆ. ಡೆಂಗೀ ನಿವಾರಣೆ ನಿಟ್ಟಿನಲ್ಲಿ ಸಮುದಾಯದ ಪಾತ್ರವು ಮಹತ್ವದಾಗಿದ್ದಾಗಿದೆ ಎಂದು ತಿಳಿಸಿದರು.

ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಶಿವಕುಮಾರ ಕೆ.ಮಾನಕರ್ ಮಾತನಾಡಿ, ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಲಾರ್ವಾ ಸಮೀಕ್ಷೆ ಕೈಗೊಳ್ಳಲು ಬಂದಾಗ ಸಾರ್ವಜನಿಕರು ಸಹಕರಿಸಬೇಕೆಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ ಸ್ವಾಗತಿಸಿ ಮಾತನಾಡಿ, ಜಿಲ್ಲೆಯಲ್ಲಿ ಡೆಂಗೀ ನಿಯಂತ್ರಣ ಕೈಗೊಳ್ಳಲು ಗುಣಮಟ್ಟದ ಲಾರ್ವಾ ಸಮೀಕ್ಷೆ ಹಾಗೂ ಜ್ವರ ಸಮೀಕ್ಷೆ ಮಾಡಿ ಖಚಿತ ಪ್ರಕರಣಗಳು ಕಂಡುಬಂದಲ್ಲಿ ಸೂಕ್ತ ಚಿಕಿತ್ಸೆ ನೀಡಿ, ಸೂಕ್ತ ಆರೈಕೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಭೆಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಅಧಿಕಾರಿಗಳು, ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು, ತಾಲೂಕಾ ಆರೋಗ್ಯಾಧಿಕಾರಿಗಳು, ಸಹಾಯಕ ಕೀಟಶಾಸ್ತ್ರಜ್ಞರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ರೂಪಸೇನ ಚವ್ಹಾಣ ವಂದಿಸಿದರು.


Spread the love

LEAVE A REPLY

Please enter your comment!
Please enter your name here