ನಮ್ಮೂರ ದಸರಾ ಉತ್ಸವಕ್ಕೆ ಆಹ್ವಾನ

0
Invitation to our Dussehra festival
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಎಸ್‌ಎಸ್‌ಕೆ ಸಮಾಜದ ವತಿಯಿಂದ ನಗರದ ಹಳೇ ಸರಾಫ್ ಬಜಾರದಲ್ಲಿರುವ ಜಗದಂಬಾ ದೇವಸ್ಥಾನದ ಸಹಸ್ರಾರ್ಜುನ ಸಮುದಾಯ ಭವನದ ಭಾಸ್ಕರಸಾ ಪವಾರ ಸಭಾಗೃಹದಲ್ಲಿ ನಡೆಯಲಿರುವ ನಮ್ಮೂರ ದಸರಾ ಉತ್ಸವ-2024 ಕಾರ್ಯಕ್ರಮಕ್ಕೆ ಗದಗ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಅವರಿಗೆ ಅಮಂತ್ರಣ ನೀಡಲಾಯಿತು.

Advertisement

ನಾಡಹಬ್ಬ ನಮ್ಮೂರ ದಸರಾ ಉತ್ಸವದ ಅಂಗವಾಗಿ ಅಕ್ಟೋಬರ್ 10ರಂದು ಗುರುವಾರ ಬೆಳಿಗ್ಗೆ 7 ಗಂಟೆಗೆ ನಡೆಯಲಿರುವ ದಸರಾ ದರಬಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಲಾಯಿತು. ಇದೇ ಸಂದರ್ಭದಲ್ಲಿ ಎಸ್‌ಎಸ್‌ಕೆ ಸಮಾಜದ ವತಿಯಿಂದ ಹಿಂದಿನಿಂದ ನಡೆದುಕೊಂಡು ಬಂದ ನಮ್ಮೂರ ದಸರಾ ದರಬಾರ ಕುರಿತು ಪಂಚ ಕಮಿಟಿ ಗೌರವ ಕಾರ್ಯದರ್ಶಿ ವಿನೋದ ಶಿದ್ಲಿಂಗ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಗದಗ ಎಸ್‌ಎಸ್‌ಕೆ ಸಮಾಜದ ಪಂಚ ಕಮಿಟಿ ಅಧ್ಯಕ್ಷ ಫಕೀರಸಾ ಬಾಂಡಗೆ, ಸಮಿತಿ ಚೇರಮನ್ ವಿಷ್ಣುಸಾ ಶಿದ್ಲಿಂಗ, ವೈಸ್ ಚೇರಮನ್ ಸಾಗರ ಪವಾರ, ವಿಶ್ವನಾಥಸಾ ಸೋಳಂಕಿ, ಕಾರ್ಯದರ್ಶಿ ರಾಘವೇಂದ್ರ ಬಾಂಡಗೆ, ಖಜಾಂಚಿ ಸತೀಶ ದವಳೆ ಮುಂತಾದವರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here