IPL 2025: ಹ್ಯಾಟ್ರಿಕ್ ಸೋಲು; ಚೆನ್ನೈ ತಂಡದಿಂದ ರುತುರಾಜ್‌ ಔಟ್‌ – ಧೋನಿ ಮತ್ತೆ ಕ್ಯಾಪ್ಟನ್‌!

0
Spread the love

ತಂಡದ ಹ್ಯಾಟ್ರಿಕ್ ಸೋಲಿನಿಂದ ಕಂಗಾಲಾಗಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ ಜೊತೆ ಗುಡ್ ನ್ಯೂಸ್ ಒಂದು ಸಿಕ್ಕಿದೆ.ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಹಾಲಿ ಕ್ಯಾಪ್ಟನ್‌ ರುತುರಾಜ್‌ ಗಾಯಕ್ವಾಡ್‌ ಅವರು ಮೊಣಕೈ ಗಾಯದ ಸಮಸ್ಯೆಗೆ ತುತ್ತಾಗಿದ್ದು, ಇಡೀ ಟೂರ್ನಿಯಿಂದಲೇ ಹೊರಗುಳಿದಿದ್ದಾರೆ. ಹೀಗಾಗಿ ಬಾಕಿ ಉಳಿದಿರುವ 9 ಪಂದ್ಯಗಳಿಗೆ ಎಂ.ಎಸ್‌ ಧೋನಿ ಅವರೇ ನಾಯಕತ್ವ ವಹಿಸಲಿದ್ದಾರೆ. ಈ ಬಗ್ಗೆ ಮುಖ್ಯಕೋಚ್‌ ಸ್ಟೀಫನ್ ಫ್ಲೆಮಿಂಗ್ ಖಚಿತಪಡಿಸಿದ್ದಾರೆ. ಇದು ಧೋನಿ ಅಭಿಮಾನಿಗಳಿಗೆ ಸಂತಸ ತಂದಿದೆ.

Advertisement

ಇತ್ತೀಚೆಗೆ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ನಡೆದ ಪಂದ್ಯದಲ್ಲಿ ತುಷಾರ್‌ ದೇಶ್‌ಪಾಂಡೆ ಅವರ ಬೌಲಿಂಗ್‌ನಲ್ಲಿ ಚೆಂಡು ರುತುರಾಜ್‌ ಅವರ ಬಲ ಮೊಣಕೈಗೆ ಬಲವಾಗಿ ಬಡಿದಿತ್ತು. ಈ ವೇಳೆ ಕೊಂಚ ಬ್ರೇಕ್‌ ತೆಗೆದುಕೊಂಡಿದ್ದ ರುತುರಾಜ್‌ ತಂಡಕ್ಕಾಗಿ ಬ್ಯಾಟಿಂಗ್‌ ಮುಂದುವರಿಸಿದ್ದರು. ಇದೀಗ ಮೊಣಕೈ ಗಾಯದ ಸಮಸ್ಯೆ ಉಲ್ಬಣಗೊಂಡಿದ್ದು, ಪ್ರಸ್ತುತ ಐಪಿಎಲ್‌ ಟೂರ್ನಿಯಿಂದಲೇ ಅವರು ಹೊರಗುಳಿಯಲಿದ್ದಾರೆ ಎಂದು ಸಿಎಸ್‌ಕೆ ಮುಖ್ಯಕೋಚ್‌ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here