HomeSports NewsIPL 2026: RCB ಉದ್ಘಾಟನಾ ಪಂದ್ಯಕ್ಕೆ ಮಳೆ ಭೀತಿ! ಬೆಂಗಳೂರಲ್ಲಿ ಇಂದು ಹೇಗಿರುತ್ತೆ ವಾತಾವರಣ?

IPL 2026: RCB ಉದ್ಘಾಟನಾ ಪಂದ್ಯಕ್ಕೆ ಮಳೆ ಭೀತಿ! ಬೆಂಗಳೂರಲ್ಲಿ ಇಂದು ಹೇಗಿರುತ್ತೆ ವಾತಾವರಣ?

For Dai;y Updates Join Our whatsapp Group

ಕ್ರಿಕೆಟ್ ಅಭಿಮಾನಿಗಳ ಬಹುಕಾಲದ ನಿರೀಕ್ಷೆಗೆ ಇಂದು ತೆರೆ ಬೀಳುತ್ತಿದೆ. ಐಪಿಎಲ್ ಸೀಸನ್ 19ರ ಉದ್ಘಾಟನಾ ಪಂದ್ಯದಲ್ಲಿ RCB ಮತ್ತು SRH ತಂಡಗಳು ಮುಖಾಮುಖಿಯಾಗುತ್ತಿವೆ.

ಈ ಹೈವೋಲ್ಟೇಜ್ ಪಂದ್ಯವು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಇತ್ತೀಚೆಗೆ ನಿಷೇಧದಿಂದ ಮುಕ್ತಗೊಂಡ ಬಳಿಕ ಇದೇ ಮೈದಾನದಲ್ಲಿ ಪಂದ್ಯ ಆಯೋಜಿಸಲಾಗಿದೆ.

ಹವಾಮಾನ ಇಲಾಖೆಯ ಪ್ರಕಾರ, ಶನಿವಾರ ಬೆಂಗಳೂರಿನಲ್ಲಿ ಮಳೆಯ ಸಾಧ್ಯತೆ ಇದೆ. ಮಧ್ಯಾಹ್ನ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದರೂ, ಸಂಜೆ ಪಂದ್ಯದ ವೇಳೆಯಲ್ಲಿ ಮಳೆಯ ಸಾಧ್ಯತೆ ಕೇವಲ 5 ಶೇಕಡಾ ಮಾತ್ರ. ಹೀಗಾಗಿ ಪಂದ್ಯ ರದ್ದಾಗುವ ಸಾಧ್ಯತೆ ಬಹಳ ಕಡಿಮೆ. ಆದರೆ, ಮಳೆ ಕಾರಣದಿಂದ ಸ್ವಲ್ಪ ಸಮಯ ವ್ಯತ್ಯಯ ಉಂಟಾಗಬಹುದು.

ಕಳೆದ ಸೀಸನ್‌ನಲ್ಲಿ ಇದೇ ಮೈದಾನದಲ್ಲಿ ನಡೆದ 5 ಪಂದ್ಯಗಳಲ್ಲಿ ಆರ್ಸಿಬಿ 2ರಲ್ಲಿ ಗೆದ್ದು, 3ರಲ್ಲಿ ಸೋಲು ಕಂಡಿತ್ತು. ಈ ಮೈದಾನದಲ್ಲಿ ವಿರಾಟ್ ಕೊಹ್ಲಿ ಅತ್ಯುತ್ತಮ ಪ್ರದರ್ಶನ ತೋರಿದ್ದಾರೆ. ಅವರು ಇಲ್ಲಿ ಆಡಿದ 106 ಇನ್ನಿಂಗ್ಸ್‌ಗಳಲ್ಲಿ 3618 ರನ್ ಗಳಿಸಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ಈ ಬಾರಿ ಉದ್ಘಾಟನಾ ಸಮಾರಂಭ ಇರುವುದಿಲ್ಲ. ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದ್ದು, ಟಾಸ್ ಪ್ರಕ್ರಿಯೆ ಸಂಜೆ 7:00ಕ್ಕೆ ನಡೆಯಲಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img