ಕನ್ನಡ ಕಿರುತೆರೆಯ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ಗ್ರ್ಯಾಂಡ್ ಫಿನಾಲೆಗೆ ಸಜ್ಜಾಗಿದೆ. ಸದ್ಯ ಬಿಗ್ಬಾಸ್ ಮನೆಯಲ್ಲಿ ತ್ರಿವಿಕ್ರಮ್, ಹನುಮಂತ, ಭವ್ಯಾ ಗೌಡ, ರಜತ್, ಮೋಕ್ಷಿತಾ, ಉಗ್ರಂ ಮಂಜು, ಗೌತಮಿ ಹಾಗೂ ಧನರಾಜ್ ಉಳಿದುಕೊಂಡಿದ್ದಾರೆ. ಈ 8 ಸ್ಪರ್ಧಿಗಳಲ್ಲಿ ಐದು ಸ್ಪರ್ಧಿಗಳು ಮಾತ್ರ ಟಾಪ್ 5 ಫೈನಲಿಸ್ಟ್ ಆಗಿ ಆಯ್ಕೆಯಾಗಲಿದ್ದಾರೆ.
ಇನ್ನೂ ಧನರಾಜ್ ಅವರು ಟಾಸ್ಕ್ನ ಮೋಸದಿಂದ ಗೆದ್ದ ಆರೋಪ ಇದೆ. ಕನ್ನಡಿಯಲ್ಲಿ ನೋಡಿ ಆಡಿದ್ದರಿಂದ ಆಟ ಅವರಿಗೆ ಸುಲಭ ಆಯಿತು. ಇನ್ನೂ, ನಾಮಿನೇಷನ್ನಿಂದ ತಪ್ಪಿಸಿಕೊಳ್ಳಲು ಬಿಗ್ಬಾಸ್ ಸ್ಪರ್ಧಿಗಳಿಗೆ ಕಾಲ ಕಾಲಕ್ಕೆ ಟಾಸ್ಕ್ಗಳನ್ನು ನೀಡುತ್ತಾ ಬಂದ್ದಿದ್ದರು.
ಅಚ್ಚರಿ ಎಂಬಂತೆ ವಾರದ ಕೊನೆಯ ಟಾಸ್ಕ್ನಲ್ಲಿ ಧನರಾಜ್ ಆಚಾರ್ಯ ಗೆದ್ದುಕೊಂಡು ಈ ವಾರದ ನಾಮಿನೇಷನ್ನಿಂದ ಸೇಫ್ ಆಗಿದ್ದರು. ಇದೀಗ ಬಿಗ್ಬಾಸ್ ಕೊಟ್ಟ ಕೊನೆಯ ಟಾಸ್ಕ್ನಲ್ಲಿ ಧನರಾಜ್ ಕನ್ನಡಿಯನ್ನು ನೋಡಿ ಪಜಲ್ ಗೇಮ್ ಆಡಿದ್ದು ಬೆಳಕಿಗೆ ಬಂದಿದೆ. ಹೀಗಾಗಿ ಬಿಗ್ಬಾಸ್ ಮಿಡ್ ವೀಕ್ ಎಲಿಮಿನೇಷನ್ ತಡೆ ಹಿಡಿದಿದ್ದರು.
ಈ ಬಗ್ಗೆ ಖುದ್ದು ಬಿಗ್ಬಾಸ್ ಮನೆಯವರ ಮುಂದೆ ಅಸಲಿ ಸತ್ಯವನ್ನು ವಿಡಿಯೋ ಮೂಲಕ ಬಿಚ್ಚಿಟ್ಟಿದ್ದಾರೆ. ಬಿಗ್ಬಾಸ್ ಮಾತನ್ನು ಕೇಳಿಸಿಕೊಂಡ ಧನರಾಜ್ ತಾವು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಜೊತೆಗೆ ಬಿಗ್ಬಾಸ್ ನನ್ನಿಂದ ಅಷ್ಟು ದೊಡ್ಡ ತಪ್ಪಾಗಿದೆ ಅಂತ ಗೊತ್ತಾಲಿಲ್ಲ. ಆ ಗೆಲುವು ನನ್ನದು ಅಲ್ಲ ಅಂತ ಅನಿಸುತ್ತಿದೆ. ನನ್ನನ್ನೂ ನಾಮಿನೇಟ್ ಮಾಡಿಕೊಂಡೆ ಪ್ರಕ್ರಿಯೆ ಶುರು ಮಾಡಿ ಪ್ಲಿಸ್ ಅಂತ ಬೇಡಿಕೊಂಡಿದ್ದಾರೆ. ಇಂದು ರಾತ್ರಿ ಪ್ರಸಾರವಾಗುವ ಸಂಚಿಕೆಯಲ್ಲಿ ಬಿಗ್ಬಾಸ್ ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಅಂತ ಕಾದು ನೋಡಬೇಕಿದೆ.