ಬಿಗ್ ಬಾಸ್ʼನಲ್ಲಿ ಧನರಾಜ್ ಮೋಸದಾಟಕ್ಕೆ ಎಲಿಮಿನೇಷನ್ ಶಿಕ್ಷೆನಾ..?! ಕಣ್ಣೀರಿಟ್ಟ ಸ್ಪರ್ಧಿ

0
Spread the love

ಕನ್ನಡ ಕಿರುತೆರೆಯ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್ 11 ಗ್ರ್ಯಾಂಡ್ ಫಿನಾಲೆಗೆ ಸಜ್ಜಾಗಿದೆ. ಸದ್ಯ ಬಿಗ್​ಬಾಸ್​ ಮನೆಯಲ್ಲಿ ತ್ರಿವಿಕ್ರಮ್​, ಹನುಮಂತ, ಭವ್ಯಾ ಗೌಡ, ರಜತ್​, ಮೋಕ್ಷಿತಾ, ಉಗ್ರಂ ಮಂಜು, ಗೌತಮಿ ಹಾಗೂ ಧನರಾಜ್​ ಉಳಿದುಕೊಂಡಿದ್ದಾರೆ. ಈ 8 ಸ್ಪರ್ಧಿಗಳಲ್ಲಿ ಐದು ಸ್ಪರ್ಧಿಗಳು ಮಾತ್ರ ಟಾಪ್​ 5 ಫೈನಲಿಸ್ಟ್​ ಆಗಿ ಆಯ್ಕೆಯಾಗಲಿದ್ದಾರೆ.

Advertisement

ಇನ್ನೂ ಧನರಾಜ್ ಅವರು ಟಾಸ್ಕ್​ನ ಮೋಸದಿಂದ ಗೆದ್ದ ಆರೋಪ ಇದೆ. ಕನ್ನಡಿಯಲ್ಲಿ ನೋಡಿ ಆಡಿದ್ದರಿಂದ ಆಟ ಅವರಿಗೆ ಸುಲಭ ಆಯಿತು. ಇನ್ನೂ, ನಾಮಿನೇಷನ್​ನಿಂದ ತಪ್ಪಿಸಿಕೊಳ್ಳಲು ಬಿಗ್​ಬಾಸ್​ ಸ್ಪರ್ಧಿಗಳಿಗೆ ಕಾಲ ಕಾಲಕ್ಕೆ ಟಾಸ್ಕ್​ಗಳನ್ನು ನೀಡುತ್ತಾ ಬಂದ್ದಿದ್ದರು.

ಅಚ್ಚರಿ ಎಂಬಂತೆ ವಾರದ ಕೊನೆಯ ಟಾಸ್ಕ್​ನಲ್ಲಿ ಧನರಾಜ್​ ಆಚಾರ್ಯ ಗೆದ್ದುಕೊಂಡು ಈ ವಾರದ ನಾಮಿನೇಷನ್​ನಿಂದ ಸೇಫ್​ ಆಗಿದ್ದರು. ಇದೀಗ ಬಿಗ್​ಬಾಸ್​ ಕೊಟ್ಟ ಕೊನೆಯ ಟಾಸ್ಕ್​ನಲ್ಲಿ ಧನರಾಜ್​ ಕನ್ನಡಿಯನ್ನು ನೋಡಿ ಪಜಲ್​ ಗೇಮ್ ಆಡಿದ್ದು ಬೆಳಕಿಗೆ ಬಂದಿದೆ. ಹೀಗಾಗಿ ಬಿಗ್​ಬಾಸ್​ ಮಿಡ್​ ವೀಕ್​ ಎಲಿಮಿನೇಷನ್​ ತಡೆ ಹಿಡಿದಿದ್ದರು.

ಈ ಬಗ್ಗೆ ಖುದ್ದು ಬಿಗ್​ಬಾಸ್​ ಮನೆಯವರ ಮುಂದೆ ಅಸಲಿ ಸತ್ಯವನ್ನು ವಿಡಿಯೋ ಮೂಲಕ ಬಿಚ್ಚಿಟ್ಟಿದ್ದಾರೆ. ಬಿಗ್​ಬಾಸ್​ ಮಾತನ್ನು ಕೇಳಿಸಿಕೊಂಡ ಧನರಾಜ್​ ತಾವು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಜೊತೆಗೆ ಬಿಗ್​ಬಾಸ್​ ನನ್ನಿಂದ ಅಷ್ಟು ದೊಡ್ಡ ತಪ್ಪಾಗಿದೆ ಅಂತ ಗೊತ್ತಾಲಿಲ್ಲ. ಆ ಗೆಲುವು ನನ್ನದು ಅಲ್ಲ ಅಂತ ಅನಿಸುತ್ತಿದೆ. ನನ್ನನ್ನೂ ನಾಮಿನೇಟ್ ಮಾಡಿಕೊಂಡೆ ಪ್ರಕ್ರಿಯೆ ಶುರು ಮಾಡಿ ಪ್ಲಿಸ್​ ಅಂತ ಬೇಡಿಕೊಂಡಿದ್ದಾರೆ.​ ಇಂದು ರಾತ್ರಿ ಪ್ರಸಾರವಾಗುವ ಸಂಚಿಕೆಯಲ್ಲಿ ಬಿಗ್​ಬಾಸ್​ ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಅಂತ ಕಾದು ನೋಡಬೇಕಿದೆ.


Spread the love

LEAVE A REPLY

Please enter your comment!
Please enter your name here