ಕಳೆದ ಕೆಲ ದಿನಗಳ ಹಿಂದೆ ಹಲ್ಲೆಗೊಳಗಾಗಿದ್ದ ನಟ ಸೈಫ್ ಅಲಿ ಖಾನ್ ಸದ್ಯ ಚೇತರಿಸಿಕೊಂಡಿದ್ದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಬೆನ್ನಲ್ಲೇ ಸೈಫ್ ಅಲಿ ಖಾನ್ ಮೇಲೆ ನಡೆದ ಹಲ್ಲೆ ನಿಜವೇ ಅಥವಾ ಸೈಫ್ ನಾಟಕ ಮಾಡ್ತಿದ್ದಾರಾ ಎಂದು ಬಿಜೆಪಿ ಮಹಾರಾಷ್ಟ್ರದ ಮೀನುಗಾರಿಕೆ ಸಚಿವ ನಿತೇಶ್ ರಾಣೆ ಪ್ರಶ್ನೆ ಮಾಡಿದ್ದಾರೆ.
ಪುಣೆಯ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮಾತನಾಡಿದ ನಿತೇಶ್ ರಾಣೆ, ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲಿನ ದಾಳಿಯನ್ನು ಪ್ರಶ್ನಿಸಿದ್ದಾರೆ. ಸೈಫ್ ಅಲಿ ಖಾನ್ ಮೇಲಿನ ದಾಳಿ ನಿಜವೇ ಅಥವಾ 54 ವರ್ಷದ ನಟ ನಟನೆ ಮಾಡ್ತಿದ್ದಾರಾ ಎಂದಿದ್ದಾರೆ.
ಮುಂಬೈನ ಲೀಲಾವತಿ ಆಸ್ಪತ್ರೆಯ ವೈದ್ಯರು ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ನಡೆಸಿದ ಚಾಕು ದಾಳಿಯಲ್ಲಿ ಬೆನ್ನುಹುರಿಯ ಬಳಿ ಆರು ಇರಿತದ ಗಾಯಗಳಾಗಿವೆ ಎಂದು ಹೇಳಿದ್ದು ನಿಜದಂತೆ ಕಾಣುತ್ತಿಲ್ಲ. ಮುಂಬೈನಲ್ಲಿ ಬಾಂಗ್ಲಾದೇಶಿಗಳು ಏನು ಮಾಡುತ್ತಿದ್ದಾರೆಂದು ನೋಡಿ. ಅವರು ಸೈಫ್ ಅಲಿ ಖಾನ್ ಅವರ ಮನೆಗೆ ಪ್ರವೇಶಿಸಿದ್ದಾರೆ. ಬಹುಶಃ ಅವರು ಸೈಫ್ ರನ್ನು ಕರೆದುಕೊಂಡು ಹೋಗಲು ಬಂದಿರಬಹುದು. ಇದು ಒಳ್ಳೆಯ ಕೆಲಸ. ಕಸವನ್ನು ತೆಗೆದುಕೊಂಡು ಹೋಗಬೇಕು” ಎಂದು ಲೇವಡಿ ಮಾಡಿದ್ದಾರೆ.
“ಅವರು ಆಸ್ಪತ್ರೆಯಿಂದ ಹೊರಬಂದಾಗ ನಾನು ನೋಡಿದೆ. ಅವರಿಗೆ ಚಾಕಿ ಇರಿತವಾಗಿತ್ತೇ ಅಥವಾ ಅವರು ನಟಿಸುತ್ತಿದ್ದಾರೆಯೇ ಎಂದು ನನಗೆ ಅನುಮಾನ ಕಾಡುತ್ತದೆ. ಏಕೆಂದರೆ ಅವರು ನಡೆಯುವಾಗ ನೃತ್ಯ ಮಾಡುತ್ತಿದ್ದರು” ಎಂದಿದ್ದಾರೆ.