HomeKarnataka Newsಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ.ವಿಜಯೇಂದ್ರ ಪ್ರಶ್ನೆ

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ.ವಿಜಯೇಂದ್ರ ಪ್ರಶ್ನೆ

For Dai;y Updates Join Our whatsapp Group

Spread the love

ಬೆಳಗಾವಿ: ಕಂದಾಯ ಸಚಿವರ ಅಕ್ರಮಗಳ ಕುರಿತಂತೆ ಇವತ್ತು ಸದನದಲ್ಲಿ ಧ್ವನಿ ಎತ್ತಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಅವರು ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ ಪ್ರಶ್ನೆಗೆ ಉತ್ತರಿಸಿದರು.

ಕಂದಾಯ ಸಚಿವರ ವಿರುದ್ಧ ನಾವು ಮಾಡಿದ ಆರೋಪ ಗಂಭೀರ ಸ್ವರೂಪದ್ದು. ಕಂದಾಯ ಸಚಿವರಾದ ಅವರು ಸರಿಯಾಗಿ ದಾಖಲಾತಿ ಪರಿಶೀಲಿಸದೇ ‘ನಮ್ಮ ತಂದೆ ಕಾಲದ್ದು, ನಮ್ಮ ತಾತನ ಕಾಲದ್ದು’ ಎಂದು ಅಕ್ರಮ ನಡೆಸಬಹುದೇ, ಇದಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ ಹಾಗಿದ್ದರೆ ಎಂದು ಪ್ರಶ್ನಿಸಿದರು.

ಜವಾಬ್ದಾರಿಯುತ ಸಚಿವೆ ಸದನಕ್ಕೆ ತಪ್ಪು ಮಾಹಿತಿ ಕೊಡುವುದು ಖಂಡಿತ ಸರಿಯಲ್ಲ ಎಂದು ಅವರು ಲಕ್ಷ್ಮಿ ಹೆಬ್ಬಾಳ್ಕರ್ ಕುರಿತ ಪ್ರಶ್ನೆಗೆ ಉತ್ತರ ನೀಡಿದರು. ಇದರ ಕುರಿತು ಬಿಜೆಪಿ- ಜೆಡಿಎಸ್ ಸಭೆಯಲ್ಲಿ ಚರ್ಚಿಸಿದ್ದೇವೆ ಎಂದು ತಿಳಿಸಿದರು. ಗೃಹಲಕ್ಷ್ಮಿ ಕುರಿತು ತಪ್ಪು ಮಾಹಿತಿ ನೀಡಿದ ಸಚಿವರು ಅಪಹಾಸ್ಯಕ್ಕೆ ಒಳಗಾಗಿದ್ದಾರೆ. ಪ್ರಾಥಮಿಕ ಮಾಹಿತಿಯೂ ಸಚಿವರ ಬಳಿ ಇರದಿದ್ದರೆ ಅದು ಖಂಡಿತ ಸರಿಯಲ್ಲ ಎಂದು ನುಡಿದರು. ಗ್ಯಾರಂಟಿಗಳ ಪರಿಣಾಮವಾಗಿ ಸಾರಿಗೆ ಇಲಾಖೆ ಸಂಕಷ್ಟಕ್ಕೆ ಸಿಲುಕಿದೆ. ಅಲ್ಲಿ ಸರಿಯಾಗಿ ಸಂಬಳ ಕೊಡಲು ಆಗುತ್ತಿಲ್ಲ ಎಂದು ಆಕ್ಷೇಪಿಸಿದರು.

ಹಳಿ ತಪ್ಪಿದ ಆಡಳಿತ..
ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಅವರು, ಬರುವ ದಿನಗಳಲ್ಲಿ ಇವರ ಬಂಡವಾಳ ಇನ್ನಷ್ಟು ಬಯಲಾಗಲಿದೆ. ತಾನೆಷ್ಟು ದಿನ ಮುಖ್ಯಮಂತ್ರಿಗಳಾಗಿ ಇರುತ್ತೇನೋ ಎಂಬ ಗೊಂದಲ ಸಿದ್ದರಾಮಯ್ಯರÀನ್ನು ಕಾಡುತ್ತಿದೆ ಎಂದು ಬಿ.ವೈ.ವಿಜಯೇಂದ್ರ ಅವರು ಹೇಳಿದರು. ಕಳೆದೊಂದು ವರ್ಷದಲ್ಲಿ ಆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಆಗಿಲ್ಲ ಎಂದು ಟೀಕಿಸಿದರು. ಒಳಜಗಳ, ಡಿನ್ನರ್ ಮೀಟಿಂಗ್ ಬೆಳಗಾವಿಯಲ್ಲೂ ಮುಂದುವರೆದಿದೆ. ಸಿಎಂ, ಸಚಿವರು, ಶಾಸಕರ ನಡುವಿನ ಒಳಜಗಳದಿಂದ, ಸಿಎಂ ವಿಚಾರದಲ್ಲಿ ಪೈಪೋಟಿಯ ಪರಿಣಾಮವಾಗಿ ಆಡಳಿತ ಹಳಿ ತಪ್ಪಿದ್ದು ಸತ್ಯ ಎಂದರು.

ಒಂದಾದ ಮೇಲೊಂದು ಹಗರಣ..
ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದಾಗಿನಿಂದ ಭ್ರಷ್ಟಾಚಾರದ ಮೂಲಕ ಹೈಕಮಾಂಡಿಗೆ ಹಣ ಸಂದಾಯ ಮಾಡುವುದು ಮುಂದುವರೆದಿದೆ. ಇದನ್ನು ಹಿಂದಿನಿಂದಲೂ ಹೇಳಿದ್ದೇನೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ನೂರಾರು ಕೋಟಿ ಪೋಲಾಗಿದೆ. ಬಳಿಕ ಒಂದಾದ ಮೇಲೊಂದು ಹಗರಣ ನಡೆಯುತ್ತಿದೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.

ಕಾಂಗ್ರೆಸ್ ಹೈಕಮಾಂಡನ್ನು ತೃಪ್ತಿ ಪಡಿಸುವ ಕಾರ್ಯ
ಗುತ್ತಿಗೆದಾರರಿಂದ ವಸೂಲಿ ಕುರಿತು ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ಪತ್ರ ಬರೆದಿದ್ದಾರೆ. ಭ್ರಷ್ಟಾಚಾರ ಬಿಟ್ಟರೆ, ರಾಜ್ಯ ಸರಕಾರದಲ್ಲಿ ಅಭಿವೃದ್ಧಿ ಕೆಲಸಗಳೇ ಆಗುತ್ತಿಲ್ಲ ಎಂದು ಆಕ್ಷೇಪಿಸಿದರು. ಇವರಿಗೆ ಬಡವರಾದರೇನು? ಶ್ರೀಮಂತ ಆದರೇನು? ರಾಜ್ಯದಲ್ಲಿ ಲೂಟಿ ಮಾಡಿ, ಖಜಾನೆ ಖಾಲಿ ಮಾಡಿ ಕಾಂಗ್ರೆಸ್ ಹೈಕಮಾಂಡನ್ನು ತೃಪ್ತಿ ಪಡಿಸಿ ತಾವು ಅಧಿಕಾರದಲ್ಲಿ ಮುಂದುವರೆಯಬೇಕಿದೆ. ಇದೊಂದೇ ಸರಕಾರದಲ್ಲಿ ನಡೆಯುತ್ತಿದೆ ಎಂದು ಆರೋಪಿಸಿದರು. ನೀರಾವರಿ ಯೋಜನೆಗಳ ಪ್ರಗತಿ ಶೇ 10ರಷ್ಟೂ ಇಲ್ಲ ಎಂದು ಅವರು ಇದೇವೇಳೆ ಆಕ್ಷೇಪಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!