ಬೆಳಗಾವಿ: ಸಿಎಂ ಬದಲಾವಣೆ ಒಪ್ಪಂದ ಆಗಿರುವುದು ನೂರಕ್ಕೆ ನೂರು ಸತ್ಯ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ಒಪ್ಪಂದ ಆಗಿರುವುದು ನೂರಕ್ಕೆ ನೂರು ಸತ್ಯ.
ಆಗ ಒಪ್ಪಿ ಸಿದ್ದರಾಮಯ್ಯ ಈಗ ಮಾತು ತಪ್ಪುತ್ತಿದ್ದಾರೆ. ಅದಕ್ಕೆ ಈಗ ಸಿದ್ದರಾಮಯ್ಯ ಜಾತಿಗಣತಿ ವರದಿ ಮಂಡಿಸಿದ್ದಾರೆ. ಅಧಿಕಾರ ಬಿಟ್ಟು ಕೊಡದಿದ್ದರೆ ಕಾಂಗ್ರೆಸ್ನಲ್ಲಿ ದಂಗೆ ಆಗಲಿದೆ” ಎಂದು ಭವಿಷ್ಯ ನುಡಿದಿದ್ದಾರೆ. ಬಿಜೆಪಿ ಸರ್ಕಾರವೇ ಉತ್ತಮ ಎಂದು ಹಲವರು ಹೇಳುತ್ತಿದ್ದಾರೆ.
ಕಾಂಗ್ರೆಸ್ಗೆ 10 ರೂ. ಕೊಡುವ ಯೋಗ್ಯತೆ ಇಲ್ಲ. ಗುತ್ತಿಗೆದಾರರ, ಅಧಿಕಾರಿಗಳ ಆತ್ಮಹತ್ಯೆ ಆಗುತ್ತಿವೆ. ಆದರೂ ಸರ್ಕಾರ ತಲೆಕೆಡಿಸಿಕೊಳ್ಳುತ್ತಿಲ್ಲ. ಮೋದಿ ಅವರು ಸಿಲಿಂಡರ್ ಬೆಲೆ ಎರಡು ಬಾರಿ ಇಳಿಸಿದ್ದಾರೆ. ಈಗ ಜಾಸ್ತಿ ಮಾಡಿದ್ದಾರೆ. ಕಾಂಗ್ರೆಸ್ ಯಾವುದಾದರೂ ಇಳಿಸಿ ಜಾಸ್ತಿ ಮಾಡಿದ್ದರೆ ಆಗ ನಾನು ಒಪ್ಪುತ್ತಿದ್ದೆ. ಈಗ ಎಲ್ಲದರ ಮೇಲೂ ತೆರಿಗೆ ಹೆಚ್ಚಾಗಿದೆ ಎಂದು ಆರೋಪಿಸಿದ್ದಾರೆ.