ಸಂವಿಧಾನದ ಚೌಕಟ್ಟಿನಲ್ಲಿಯೇ ಮೀಸಲಾತಿ ನೀಡಿರುವುದು ಸ್ಪಷ್ಟ: ಬಿ.ಕೆ ಹರಿಪ್ರಸಾದ್

0
Spread the love

ನವದೆಹಲಿ: ಸಂವಿಧಾನದ ಚೌಕಟ್ಟಿನಲ್ಲಿಯೇ ಮೀಸಲಾತಿ ನೀಡಿರುವುದು ಸ್ಪಷ್ಟ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ತಿದ್ದುಪಡಿಯ ಬದಲು ಬದಲಾವಣೆ ಎಂದು ಹೇಳಿರಬಹುದು.

Advertisement

ಅಲ್ಪಸಂಖ್ಯಾತ ಸಮುದಾಯಗಳಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಸಂವಿಧಾನದ ತಿದ್ದುಪಡಿಯ ಅಗತ್ಯವೂ ಇಲ್ಲ, ಬದಲಾವಣೆಯ ಅನಿವಾರ್ಯತೆಯೂ ಇಲ್ಲ. ಸಂವಿಧಾನದ ಚೌಕಟ್ಟಿನಲ್ಲಿಯೇ ಮೀಸಲಾತಿ ನೀಡಿರುವುದು ಸ್ಪಷ್ಟ ಎಂದು ಹೇಳಿದರು.

ಮುಸ್ಲಿಂ ಸಮುದಾಯಗಳಿಗೆ ಮೀಸಲಾತಿ ಕೇವಲ ನಮ್ಮ‌ರಾಜ್ಯದಲ್ಲಿ ಮಾತ್ರವಿಲ್ಲ. ಗುಜರಾತಿನಲ್ಲೂ ಕೂಡ ಮೀಸಲಾತಿ ನೀಡಿದೆ. ಕೇಂದ್ರ ಸರ್ಕಾರದಲ್ಲಿಯೂ ಕೂಡ ನಾಲ್ಕು ಪಂಗಡಗಳನ್ನು ಹೊರತು ಉಳಿದವರಿಗೆ ಮೀಸಲಾತಿ ನೀಡಿದೆ.

ಗುಜರಾತಿನಲ್ಲಿ 101 ಸಮುದಾಯಗಳಲ್ಲಿ 23 ಮುಸ್ಲಿಂ ಒಳ ಪಂಗಡಗಳಿಗೆ ಮೀಸಲಾತಿ ನೀಡಲಾಗಿದೆ. ಮುಸ್ಲಿಂ ಸಮುದಾಯಗಳು ಹಿಂದುಳಿದಿವೆ ಎಂದು ಕೆಲವು ಆಯೋಗಗಳು ಕೂಡ ವರದಿ ನೀಡಿದೆ ಎಂದು ಬಿ.ಕೆ ಹರಿಪ್ರಸಾದ್‌ ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here