ಎರಡೂ ಪಕ್ಷಗಳೂ ಸೇರಿ ಮೂರೂ ಕ್ಷೇತ್ರ ಗೆಲ್ಲೋದಿಕ್ಕೆ ನಿರ್ಧಾರ ಆಗಿದೆ: ಬಿ.ಎಸ್‌.ಯಡಿಯೂರಪ್ಪ

0
Spread the love

ಬೆಂಗಳೂರು: ಎರಡೂ ಪಕ್ಷಗಳೂ ಸೇರಿ ಮೂರೂ ಕ್ಷೇತ್ರ ಗೆಲ್ಲೋದಿಕ್ಕೆ ನಿರ್ಧಾರ ಆಗಿದೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಈಗಾಗಲೇ ಅಮಿತ್ ಶಾ ಅವರೂ ಚನ್ನಪಟ್ಟಣದಲ್ಲಿ ಜೆಡಿಎಸ್‌ನವ್ರು ಘೋಷಣೆ ಮಾಡ್ತಾರೆ ಅಂದಿದ್ದಾರೆ. ಚನ್ನಪಟ್ಟಣ ಜೆಡಿಎಸ್‌ ಕ್ಷೇತ್ರ, ಅವರಿಗೆ ಯಾರು ಬೇಕೋ ಅವರ ಹೆಸರು ಘೋಷಣೆ ಮಾಡ್ತಾರೆ ಎಂದು ಹೇಳಿದರು.

Advertisement

ಬಿಜೆಪಿಯಿಂದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಲಾಗಿದೆ. ಚನ್ನಪಟ್ಟಣದಲ್ಲಿ ಜೆಡಿಎಸ್‌ನವ್ರು ಅನೌನ್ಸ್ ಮಾಡಿಕೊಳ್ಳಬಹುದು ಅಂತಾ ಅಮಿತ್ ಶಾ ಹೇಳಿದ್ದಾರೆ. ಹೀಗಾಗಿ ಚನ್ನಪಟ್ಟಣದಲ್ಲಿ ಜೆಡಿಎಸ್‌ನವರೇ ಘೋಷಣೆ ಮಾಡ್ತಾರೆ. ಎರಡೂ ಪಕ್ಷಗಳೂ ಸೇರಿ ಮೂರೂ ಕ್ಷೇತ್ರ ಗೆಲ್ಲೋದಿಕ್ಕೆ ನಿರ್ಧಾರ ಆಗಿದೆ ಎಂದು ಸ್ಪಷ್ಟಪಡಿಸಿದರು.


Spread the love

LEAVE A REPLY

Please enter your comment!
Please enter your name here