ಚಿತ್ರನಟ ದರ್ಶನ್ʼಗೆ ವಿಶೇಷ ಆತಿಥ್ಯ ಸಿಗುತ್ತಿರೋದು ಸರಿಯಲ್ಲ: ಸಂಸದ ಯದುವೀರ್

0
Spread the love

ಮೈಸೂರು: ಚಿತ್ರದುರ್ಗದ ವ್ಯಕ್ತಿ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಒಟ್ಟು 17 ಆರೋಪಿಗಳು ಜೈಲಿನಲ್ಲಿದ್ದಾರೆ. ಆದರೆ ಕಳೆದ ಮೂರು ತಿಂಗಳಿನಿಂದ ದರ್ಶನ್​​ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಆದರೆ ನಿನ್ನೆ ದರ್ಶನ್​ಗೆ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ದೃಶ್ಯ ಸಮೇತ ಮುನ್ನಲೆಗೆ ಬಂದಿವೆ. ಇನ್ನೂ ಈ ಬಗ್ಗೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ ಒಡೆಯ ಪ್ರತಿಕ್ರಿಯೇ ನೀಡಿದ್ದಾರೆ.

Advertisement

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಸೆಂಟ್ರಲ್ ಜೈಲಿನಲ್ಲಿ ಕೊಲೆ ಅರೋಪಿ ಚಿತ್ರನಟ ದರ್ಶನ್​ʼಗೆ ವಿಶೇಷ ಆತಿಥ್ಯ ಸಿಗುತ್ತಿರೋದು ಸರಿಯಲ್ಲ, ಅರೋಪಿಗಳು ಮತ್ತು ಕೈದಿಗಳು ಯಾರೇ ಅಗಿರಲಿ, ಜೈಲಿನ ನಿಯಮಗಳು ಎಲ್ಲರಿಗೂ ಸಮಾನವಅಗಿರಬೇಕು, ಒಬ್ಬರ ಕಣ್ಣಿಗೆ ಬೆಣ್ಣೆ ಮತ್ತೊಬ್ಬರ ಕಣ್ಣಿಗೆ ಸುಣ್ಣದಂಥ ಸ್ಥಿತಿ ನಿರ್ಮಾಣವಾಗಬಾರದು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ ಒಡೆಯರ್ ಹೇಳಿದರು.


Spread the love

LEAVE A REPLY

Please enter your comment!
Please enter your name here