ದ್ವೇಷ ಮನೋಭಾವನೆಯಿಂದ ಸುಳ್ಳು ಆರೋಪ ಮಾಡೋದು ಸರಿಯಲ್ಲ: ಗೋವಿಂದ ಕಾರಜೋಳ

0
Spread the love

ಬಳ್ಳಾರಿ: ಸಿದ್ದರಾಮಯ್ಯ ಏನಾದರು ಮಾತನಾಡಿದರೆ ಅದನ್ನು ಬೆಂಬಲಿಸಲು ಯಾವ ಶಾಸಕರು, ಸಚಿವರು ಎದ್ದು ನಿಲ್ಲುತ್ತಿಲ್ಲ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಏನಾದರು ಮಾತನಾಡಿದರೆ ಅದನ್ನು ಬೆಂಬಲಿಸಲು ಯಾವ ಶಾಸಕರು, ಸಚಿವರು ಎದ್ದು ನಿಲ್ಲುತ್ತಿಲ್ಲ.

Advertisement

ಸಿದ್ದರಾಮಯ್ಯ ಈ ಹಗರಣಗಳಲ್ಲಿ ಸಿಕ್ಕಿ ಹಾಕಿಕೊಂಡರೆ ಎಂದು ಭಯದಿಂದ ಎಲ್ಲರೂ ಅವರನ್ನು ಬಿಟ್ಟು ದೂರ ಸರಿಯುತ್ತಿದ್ದಾರೆ. ಬಿಜೆಪಿ ಕಾಲದ 21 ಹಗರಣಗಳನ್ನು ತನಿಖೆ ಮಾಡುತ್ತಾರಂತೆ. ನೀವು ಒಂದು ವರ್ಷ ಮೂರು ತಿಂಗಳು ಕಡುಬು ತಿನ್ನುತ್ತಿದ್ರಾ? ಇಷ್ಟು ದಿನ ಯಾಕೆ ಬಾಯಿ ಮುಚ್ಚಿಕೊಂಡಿದ್ರಿ? ದ್ವೇಷ ಮನೋಭಾವನೆಯಿಂದ ಸುಳ್ಳು ಆರೋಪ ಮಾಡೋದು ಸರಿಯಲ್ಲ ಎಂದರು.


Spread the love

LEAVE A REPLY

Please enter your comment!
Please enter your name here