HomeGadag Newsರೈತರ ಹಿತ ಕಾಯುವುದು ಸಹಕಾರಿಗಳ ಕರ್ತವ್ಯ: ಜಿ.ಎಸ್. ಪಾಟೀಲ

ರೈತರ ಹಿತ ಕಾಯುವುದು ಸಹಕಾರಿಗಳ ಕರ್ತವ್ಯ: ಜಿ.ಎಸ್. ಪಾಟೀಲ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ರೋಣ: ರೈತರ ಹಿತವನ್ನು ಬಯಸುವುದು ಸಹಕಾರಿ ಸಂಘಗಳ ಆದ್ಯ ಕರ್ತವ್ಯವಾಗಿದ್ದು, ನೂತನವಾಗಿ ಆಯ್ಕೆಯಾದ ಸದಸ್ಯರು ಇದನ್ನು ಅರಿತು ತಮ್ಮ ಕೆಲಸ ನಿರ್ವಹಿಸಬೇಕು ಎಂದು ರಾಜ್ಯ ಖನಿಜ ನಿಗಮದ ಅಧ್ಯಕ್ಷರು, ಶಾಸಕರಾದ ಜಿ.ಎಸ್. ಪಾಟೀಲ ಹೇಳಿದರು.

ಅವರು ರವಿವಾರ ಸಂಜೆ ತಮ್ಮ ನಿವಾಸದಲ್ಲಿ ಹೊಸಳ್ಳಿ ಗ್ರಾಮದ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಜಯ ಗಳಿಸಿದ ಕಾಂಗ್ರೆಸ್ ಬೆಂಬಲಿತ ಸದಸ್ಯರನ್ನು ಸತ್ಕರಿಸಿ ಮಾತನಾಡಿದರು.

ಸಹಕಾರಿ ಸಂಘಗಳು ಮೊದಲಿನಿಂದಲೂ ರೈತರ ಹಿತಕ್ಕಾಗಿ ಬೆಳೆದು ಬಂದಿರುವ ಸಂಘಗಳು. ಸದಸ್ಯರು ರೈತರ ಬೆಳವಣಿಗೆಯನ್ನು ಬಯಸಿದಾಗ ಮಾತ್ರ ಕೃಷಿ ಪತ್ತಿನ ಸಹಕಾರಿ ಸಂಘ ಬೆಳೆಯಲು ಸಾಧ್ಯವಾಗುತ್ತದೆ. ಮುಖ್ಯವಾಗಿ ಸಹಕಾರಿ ಸಂಘಗಳ ಆರ್ಥಿಕ ಬೆಳವಣಿಗೆಯಲ್ಲಿ ರೈತರ ಪಾಲು ಕೂಡ ಇದ್ದು, ತೆಗೆದುಕೊಂಡ ಸಾಲವನ್ನು ಸಕಾಲಕ್ಕೆ ಮರಳಿಸಬೇಕು. ಇದರಿಂದ ಸಂಘದ ಚೇತರಿಕೆ ಜೊತೆಗೆ ಮತ್ತೆ ಹೆಚ್ಚಿನ ಸಾಲ ಪಡೆಯಲು ಸಹಕಾರಿಯಾಗುತ್ತದೆ ಎಂದರು.

ಕೆಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಐ.ಎಸ್. ಪಾಟೀಲ ಮಾತನಾಡಿ, ಗ್ರಾಮೀಣ ಭಾಗಗಳಲ್ಲಿ ರೈತರು ತಮ್ಮ ಕೃಷಿ ಚಟುವಟಿಕೆಗಳ ಬಲವರ್ಧನೆಗೊಳಿಸಲು ಸಹಕಾರಿ ಸಂಘಗಳತ್ತ ಅವಲಂಬಿತರಾಗಿರುತ್ತಾರೆ. ಅಲ್ಲದೆ ಗ್ರಾಮದಲ್ಲಿಯೇ ಹಣಕಾಸಿನ ವ್ಯವಹಾರ ನಡೆಯುವುದರಿಂದ ಕೃಷಿ ಚಟುವಟಿಕೆಗಳಲ್ಲಿ ಹೆಚ್ಚಿನ ಸಮಯವನ್ನು ಕಳೆಯುತ್ತಾರೆ. ಈ ದಿಶೆಯಲ್ಲಿ ಸಹಕಾರಿ ಸಂಘಗಳು ಕೂಡ ರೈತರಿಗೆ ಹೆಚ್ಚಿನ ಸಾಲವನ್ನು ಕೊಡುವ ಜೊತೆಗೆ ಅವರ ಪ್ರಗತಿಗೆ ಕಾರಣವಾಗಬೇಕು ಎಂದರು.

ಸಹಕಾರಿ ಸಂಘಗಳಲ್ಲಿ ಸ್ಥಳಾವಕಾಶವಿದ್ದರೆ ಅಲ್ಲಿ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸಿಕೊಳ್ಳಬೇಕು. ಇದರಿಂದ ಸಹಕಾರಿ ಸಂಘಗಳಿಗೆ ಆದಾಯ ಸಿಗುತ್ತದೆ. ಸಹಕಾರಿ ಸಂಘಗಳಿಗೆ ಸರ್ಕಾರ ಕೊಡಮಾಡುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ರೈತರ ಮತ್ತು ಕೃಷಿ ಪತ್ತಿನ ಸಹಕಾರಿ ಸಂಘದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷರಾದ ಸಂಗಪ್ಪ ಮೆಣಸಿನಕಾಯಿ, ಪಸಾರಾದ, ವಿ.ಬಿ. ಸೋಮನಕಟ್ಟಿಮಠ ಸೇರಿದಂತೆ ಪಿಎಲ್‌ಡಿ ಬ್ಯಾಂಕ್ ನಿರ್ದೇಶಕರು, ಮುಖಂಡರು ಉಪಸ್ಥಿತರಿದ್ದರು.

ಇತ್ತೀಚೆಗೆ ಹೊಸಳ್ಳಿ ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ ಗ್ರಾ.ಪಂ ಚುನಾವಣೆಯನ್ನೂ ಮೀರಿಸುವಂತೆ ನಡೆದಿತ್ತು. ಅಲ್ಲದೆ ಗ್ರಾಮದಲ್ಲಿ ಡಿಆರ್ ಪೊಲೀಸ್ ತುಕಡಿಯನ್ನು ನಿಯೋಜಿಸಲಾಗಿತ್ತು. ಒಟ್ಟು 12 ಸ್ಥಾನಗಳನ್ನು ಹೊಂದಿರುವ ಹೊಸಳ್ಳಿ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಬಿಜೆಪಿ ಬೆಂಬಲಿತ ಇಬ್ಬರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದರು. ಉಳಿದ 10 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 10 ಸ್ಥಾನಗಳನ್ನು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುವ ಮೂಲಕ ಆಡಳಿತದ ಚುಕ್ಕಾಣಿಯನ್ನು ಹಿಡಿದರು. ಹೇಮಯ್ಯ ಹಿರೇಮಠ, ಭೀಮರೆಡ್ಡಪ್ಪ ರೆಡ್ಡೇರ, ಶರಣಪ್ಪ ಮೇಟಿ, ಕಳಕಪ್ಪ ಪಟ್ಟಣಶೆಟ್ಟಿ, ಅಂದಪ್ಪ ಹೂಗಾರ, ಪರಶುರಾಮ ಕುರಿ, ಬಸವರಾಜ ತೆಗ್ಗಿ, ಶರಣಪ್ಪ ಪೂಜಾರ, ಜುಲೇಖಾ ಬೇಗಂ ಹೊಸಳ್ಳಿ, ರೇಣುಕಾಬಾಯಿ ಕದಂ ಆಯ್ಕೆಗೊಂಡ ಸದಸ್ಯರಾಗಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!