Amul v Nandini: ಟೆಂಡರ್’ನಲ್ಲಿ ಭಾಗಿಯಾಗದೇ ಇರುವುದು ತಪ್ಪು. ನಮ್ಮ ಲೋಪ ಇದೆ: ಭೀಮಾ ನಾಯಕ್

0
Spread the love

ಬೆಂಗಳೂರು: ಟೆಂಡರ್‌’ನಲ್ಲಿ ಭಾಗಿಯಾಗದೇ ಇರುವುದು ತಪ್ಪು. ನಮ್ಮ ಲೋಪ ಇದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೆಎಂಎಫ್ ಟೆಂಡರ್‌ನಲ್ಲಿ ಭಾಗಿಯಾಗಬೇಕಿತ್ತು. ಆದರೆ ಯಾಕೆ ಭಾಗಿಯಾಗಿಲ್ಲ ಎಂದು ಗೊತ್ತಿಲ್ಲ.

Advertisement

ಟೆಂಡರ್‌ನಲ್ಲಿ ಭಾಗಿಯಾಗದೇ ಇರುವುದು ತಪ್ಪು. ನಮ್ಮ ಲೋಪ ಇದೆ. ಮೊದಲೇ ಸಿಎಂ, ಡಿಸಿಎಂ ಅವರನ್ನು ಭೇಟಿಯಾಗಿ ಈ ಬಗ್ಗೆ ಮಾತಾಡಬೇಕಿತ್ತು. ಮಾಹಿತಿ ಕೊರತೆಯಿಂದಾಗಿ ಹೀಗೆ ಆಗಿರಬಹುದು ಎಂದು ತಿಳಿಸಿದ್ದಾರೆ.

ಕೆಎಂಎಫ್ ಕಡೆಯಿಂದ ನಿರ್ಲಕ್ಷ್ಯ ಆಗಿರಬಹುದು. ನಾನು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಈಗ ನಂದಿನಿಗೆ ಅವಕಾಶ ಕೊಡಲಾಗುತ್ತದೆ ಎಂದು ಮಾತುಕತೆ ನಡೆಯುತ್ತಿದೆ. ಮುಂದೆ ಏನಾಗುತ್ತದೆ ಎಂದು ಕಾದುನೋಡಬೇಕು ಎಂದಿದ್ದಾರೆ.


Spread the love

LEAVE A REPLY

Please enter your comment!
Please enter your name here