ಬೆಂಗಳೂರು:- ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂಬ ನಟ ಕಮಲ್ ಹಾಸನ್ ಹೇಳಿಕೆ ಕುರಿತಂತೆ ನಟ ಶಿವಣ್ಣ ಕೊನೆಗೂ ಮೌನಮುರಿದಿದ್ದಾರೆ.
ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಿವಣ್ಣ, ಕಮಲ್ ಹಾಸನ್ ಹೇಳಿದ ಮಾತನ್ನ ನಾನೇನು ಸಮರ್ಥನೆ ಮಾಡಿಕೊಳ್ಳಲ್ಲ. ಭಾಷೆ ಮಾತಾಡ್ತಿದ್ದಾರೆ ಅಂದಾಗ ನಾನು ಕೈ ತಟ್ಟಿದ್ದು ನಿಜ. ಆ ಸಂದರ್ಭದಲ್ಲಿ ಏನ್ ಮಾತಾಡ್ತಿದ್ದಾರೆ ಅಂತಾ ಗೊತ್ತಾಗ್ಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕನ್ನಡ ಅಭಿಮಾನದ ಬಗ್ಗೆ ಎಲ್ಲರೂ ಮಾತಾಡ್ತಿದ್ದಾರೆ. ಕನ್ನಡ ಅಭಿಮಾನ ಏನು ಅನ್ನೋದು ನಮಗೂ ಗೊತ್ತಿದೆ. ನಾನು ಕೂಡ ಕನ್ನಡ ಅಭಿಮಾನಿ. ಅಣ್ಣಾವ್ರ ಕನ್ನಡ ಅಭಿಮಾನ ನಿಮಗೆಲ್ಲರಿಗೂ ಗೊತ್ತೇ ಇದೆ ಎಂದು ಶಿವಣ್ಣ ತಿಳಿಸಿದ್ದಾರೆ.
ಸ್ಟೇಜ್ನಲ್ಲಿ ನೀವು ಯಾಕೆ ಪ್ರಶ್ನೆ ಮಾಡ್ಲಿಲ್ಲ ಅಂದಾಗ, ಅವ್ರು ಮಾತನಾಡಿದ್ದು ನನಗೆ ಸ್ಪಷ್ಟವಾಗಿ ಕೇಳಲಿಲ್ಲ. ನೀವು ಆ ಬಗ್ಗೆ ಅವರನ್ನೇ ಪ್ರಶ್ನೆ ಮಾಡಬೇಕು. ಕಮಲ್ ಹಾಸನ್ ಮಾತಾಡಿದ್ದನ್ನ ನಾನು ಸಮರ್ಥನೆ ಮಾಡಿಕೊಳ್ಳಲ್ಲ. ಆ ಬಗ್ಗೆ ಅವರನ್ನೇ ಪ್ರಶ್ನೆ ಮಾಡಿ. ನಾನು ಎರಡನೇ ಬಾರಿ ಕ್ಲಿಪ್ಪಿಂಗ್ ಕೇಳಿದಾಗಲೇ ಗೊತ್ತಾಗಿದ್ದು ಎಂದಿದ್ದಾರೆ.