ವಿಜಯಪುರ:– ಬಾಂಬ್ ಕಟ್ಟಿಕೊಂಡು ಯುದ್ಧಕ್ಕೆ ಪಾಕ್ ಗಡಿಗೆ ಹೋಗ್ತೀನಿ ಎಂಬ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಿಮ್ಮ ಭಾಷಣ ಬೇಡ, ನೀವು ಹೋಗುವುದೂ ಬೇಡ. ಸುಮ್ಮನಿದ್ದರೆ ಸಾಕು. ಸೈನ್ಯದ ಶಕ್ತಿ, ಸೈನಿಕರು, ಇಂಟಲಿಜೆನ್ಸ್ ಬಗ್ಗೆ ವಿಶ್ವಾಸವಿಡಿ. ಹೇಳಿಕೆಗಳನ್ನ ಕೊಡದೇ ಬಾಯಿ ಮುಚ್ಚಿಕೊಂಡಿದ್ದರೆ ಸಾಕು. ಜಮೀರ್ ಶಾಂತವಾಗಿರೋದೇ ದೇಶಕ್ಕೆ ಮಾಡುವ ದೊಡ್ಡ ಸೇವೆ. ಜಮೀರ್ ದೊಡ್ಡ ತ್ಯಾಗಕ್ಕೆ ಹೊರಟಿದ್ದಾರೆ, ಅವರಂತಹ ದೊಡ್ಡ ತ್ಯಾಗದವರು ಯಾರೂ ಇಲ್ಲ ಎಂದು ವ್ಯಂಗ್ಯವಾಡಿದರು.
ನೀವು ನಿಮ್ಮ ಪಕ್ಷದವರು ಶಾಂತಿಯಿಂದ ಇರಿ. ಜಮೀರ್, ಸಂತೋಷ್ ಲಾಡ್, ಖರ್ಗೆ, ಸಿದ್ದರಾಮಯ್ಯ ಸುಮ್ಮನಿದ್ದರೆ ಸಾಕು. ಡಿಕೆ ಶಿವಕುಮಾರ್ ಟೆರರಿಸ್ಟ್ಗಳನ್ನು ಬ್ರದರ್ ಎನ್ನದಿದ್ದರೆ ಸಾಕು. ಸೇನೆ ಎಲ್ಲವನ್ನೂ ನಿಭಾಯಿಸುತ್ತದೆ. ಸೈನ್ಯದ, ಸೈನಿಕರ ಆತ್ಮಸ್ಥೈರ್ಯ ಕುಗ್ಗಿಸದೇ ಸುಮ್ಮನಿದ್ದರೆ ಸಾಕು ಎಂದು ಕಾಂಗ್ರೆಸ್ಸಿಗರಿಗೆ ತಿರುಗೇಟು ನೀಡಿದರು.