ರಾಮನಗರ: ಜಮೀರ್ ಮಾತಿನಿಂದ ನನಗೆ ಬರಬೇಕಿದ್ದ ಒಕ್ಕಲಿಗ ಮತಗಳು ಬಂದಿಲ್ಲ ಅನ್ನಿಸುತ್ತೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಯಾರೇ ಗೆದ್ರೂ ಕೂದಲೆಳೆಯ ಅಂತರದಲ್ಲಿ ಫಲಿತಾಂಶ ಬರಬಹುದು. ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರಿಗೆ ಕೃತಜ್ಞತೆ ಅರ್ಪಿಸುತ್ತೇನೆ. ಸಿಎಂ, ಡಿಸಿಎಂ, ಸಚಿವರು,
Advertisement
ಡಿ.ಕೆ.ಸುರೇಶ್ಗೆ ಧನ್ಯವಾದ ಹೇಳುತ್ತೇನೆ. ಮೊಮ್ಮಗ ಗೆಲ್ಲಲೇಬೇಕೆಂದು ದೇವೇಗೌಡರು ಹೋರಾಡಿದ್ದಾರೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಸಮಬಲದ ಹೋರಾಟ ಅಂತಾ ಅನ್ಸುತ್ತೆ. ಕೆಲವರ ಮಾತುಗಳು ಜನರ ಭಾವನೆಗೆ ಘಾಸಿ ಆಗಿದೆ ಅನ್ನಿಸುತ್ತೆ. ಸಚಿವ ಜಮೀರ್ ಮಾತಿನಿಂದ ಮುಸ್ಲಿಮರಿಂದ ಸ್ವಲ್ಪ ಮತ ಬಂದ್ರೂ. ನನಗೆ ಬರಬೇಕಿದ್ದ ಒಕ್ಕಲಿಗ ಮತಗಳು ಬಂದಿಲ್ಲ ಅನ್ನಿಸುತ್ತೆ ಎಂದು ಪರೋಕ್ಷವಾಗಿ ಜಮೀರ್ ಅಹಮ್ಮದ್ ಖಾನ್ ಕುಮಾರಸ್ವಾಮಿ ಬಗ್ಗೆ ಆಡಿದ ಮಾತಿನ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.